<p><strong>ಬೆಂಗಳೂರು</strong>: ಸಂಸದ ತೇಜಸ್ವಿ ಸೂರ್ಯ ಮತ್ತು ಮೂವರು ಶಾಸಕರು ಮೇ 4ರಂದು ಕೋವಿಡ್ ವಾರ್ ರೂಮ್ ಮೇಲೆ ದಾಳಿ ನಡೆಸಿದ ನಂತರ ಅಮಾನತುಗೊಂಡಿದ್ದ 17 ಮುಸ್ಲಿಂ ನೌಕರರು ಸೋಮವಾರದಿಂದ (ಮೇ 10) ಮತ್ತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.</p>.<p>ಬಿಬಿಎಂಪಿಯಲ್ಲಿ ಹಾಸಿಗೆ ಬ್ಲಾಕಿಂಗ್ ನಡೆಯುತ್ತಿದೆ ಎಂದು ಆರೋಪಿಸಿದ್ದ ಸಂಸದ ಮತ್ತು ಶಾಸಕರು ಈ ನೌಕರರ ವಿರುದ್ಧ ಹರಿಹಾಯ್ದಿದ್ದರು. ಈ ಹಗರಣಕ್ಕೆ ಕೋಮು ಸ್ವರೂಪ ನೀಡಿದ್ದರು. ವಾರ್ ರೂಮ್ನಲ್ಲಿ 212 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಮುಸ್ಲಿಂ ಸಮುದಾಯದ ಒಬ್ಬರು ಮಾತ್ರ ಹಾಸಿಗೆ ನಿಯೋಜನೆ ವಿಭಾಗದಲ್ಲಿ ಇದ್ದರು.</p>.<p>ಕ್ರಿಸ್ಟಲ್ ಇನ್ಫೊಸಿಸ್ಟಂ ಅಂಡ್ ಸರ್ವಿಸಸ್ ಎಂಬ ಹೊರಗುತ್ತಿಗೆ ಸಂಸ್ಥೆ ಈ ನೌಕರರನ್ನು ಬಿಬಿಎಂಪಿಗೆ ಪೂರೈಸಿತ್ತು. ಈ ಸಂಸ್ಥೆಯ ಅಧಿಕಾರಿಗಳು, ಕೋವಿಡ್ ದಕ್ಷಿಣ ವಲಯ ವಾರ್ ರೂಮ್ನ ಉಸ್ತುವಾರಿ, ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಅವರನ್ನು ಶನಿವಾರ ಭೇಟಿ ಮಾಡಿದ್ದು, ‘ಈ ಮುಸ್ಲಿಂ ನೌಕರರು ಹಾಸಿಗೆ ಬ್ಲಾಕಿಂಗ್ನಲ್ಲಿ ಪಾಲ್ಗೊಂಡಿಲ್ಲ. ಇವರನ್ನು ಮರುನೇಮಕ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.</p>.<p>‘ಈ ಕೆಲಸವು ಅನೇಕರ ಜೀವನದ ಪ್ರಶ್ನೆಯಾಗಿದೆ. 17 ಮುಸ್ಲಿಂ ನೌಕರರನ್ನು ಮತ್ತೆ ನೇಮಿಸಿಕೊಳ್ಳಲಾಗುವುದು. ಸೋಮವಾರದಿಂದಲೇ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ’ ಎಂದು ತುಳಸಿ ಮದ್ದಿನೇನಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಂಸದ ತೇಜಸ್ವಿ ಸೂರ್ಯ ಮತ್ತು ಮೂವರು ಶಾಸಕರು ಮೇ 4ರಂದು ಕೋವಿಡ್ ವಾರ್ ರೂಮ್ ಮೇಲೆ ದಾಳಿ ನಡೆಸಿದ ನಂತರ ಅಮಾನತುಗೊಂಡಿದ್ದ 17 ಮುಸ್ಲಿಂ ನೌಕರರು ಸೋಮವಾರದಿಂದ (ಮೇ 10) ಮತ್ತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.</p>.<p>ಬಿಬಿಎಂಪಿಯಲ್ಲಿ ಹಾಸಿಗೆ ಬ್ಲಾಕಿಂಗ್ ನಡೆಯುತ್ತಿದೆ ಎಂದು ಆರೋಪಿಸಿದ್ದ ಸಂಸದ ಮತ್ತು ಶಾಸಕರು ಈ ನೌಕರರ ವಿರುದ್ಧ ಹರಿಹಾಯ್ದಿದ್ದರು. ಈ ಹಗರಣಕ್ಕೆ ಕೋಮು ಸ್ವರೂಪ ನೀಡಿದ್ದರು. ವಾರ್ ರೂಮ್ನಲ್ಲಿ 212 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಮುಸ್ಲಿಂ ಸಮುದಾಯದ ಒಬ್ಬರು ಮಾತ್ರ ಹಾಸಿಗೆ ನಿಯೋಜನೆ ವಿಭಾಗದಲ್ಲಿ ಇದ್ದರು.</p>.<p>ಕ್ರಿಸ್ಟಲ್ ಇನ್ಫೊಸಿಸ್ಟಂ ಅಂಡ್ ಸರ್ವಿಸಸ್ ಎಂಬ ಹೊರಗುತ್ತಿಗೆ ಸಂಸ್ಥೆ ಈ ನೌಕರರನ್ನು ಬಿಬಿಎಂಪಿಗೆ ಪೂರೈಸಿತ್ತು. ಈ ಸಂಸ್ಥೆಯ ಅಧಿಕಾರಿಗಳು, ಕೋವಿಡ್ ದಕ್ಷಿಣ ವಲಯ ವಾರ್ ರೂಮ್ನ ಉಸ್ತುವಾರಿ, ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಅವರನ್ನು ಶನಿವಾರ ಭೇಟಿ ಮಾಡಿದ್ದು, ‘ಈ ಮುಸ್ಲಿಂ ನೌಕರರು ಹಾಸಿಗೆ ಬ್ಲಾಕಿಂಗ್ನಲ್ಲಿ ಪಾಲ್ಗೊಂಡಿಲ್ಲ. ಇವರನ್ನು ಮರುನೇಮಕ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.</p>.<p>‘ಈ ಕೆಲಸವು ಅನೇಕರ ಜೀವನದ ಪ್ರಶ್ನೆಯಾಗಿದೆ. 17 ಮುಸ್ಲಿಂ ನೌಕರರನ್ನು ಮತ್ತೆ ನೇಮಿಸಿಕೊಳ್ಳಲಾಗುವುದು. ಸೋಮವಾರದಿಂದಲೇ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ’ ಎಂದು ತುಳಸಿ ಮದ್ದಿನೇನಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>