<p><strong>ಬೆಂಗಳೂರು: </strong>‘ಕೋವಿಡ್ ನಿಯಂತ್ರಣಕ್ಕಾಗಿ ನಗರದಾದ್ಯಂತ ಕೋವಿಡ್ ನಿಯಮಾವಳಿ ಜಾರಿಯಲ್ಲಿದ್ದು, ಇದರನ್ವಯ ಏ.20ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.</p>.<p>‘ಈ ವೇಳೆ ನಗರದಲ್ಲಿ ಯಾವುದೇ ಗುಂಪು ಅಥವಾ ಸಂಘಟನೆಗಳು ಪ್ರತಿಭಟನೆ, ಧರಣಿ,ರ್ಯಾಲಿ, ಮುಷ್ಕರ ನಡೆಸುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದೂ ಎಚ್ಚರಿಸಿದ್ದಾರೆ.</p>.<p>‘ಧಾರ್ಮಿಕ ಸ್ಥಳಗಳಲ್ಲಿ ಗುಂಪು ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಕಾರ್ಯಕ್ರಮಗಳಲ್ಲೂ ಹೆಚ್ಚು ಜನ ಸೇರುವಂತಿಲ್ಲ. ಈಜುಕೊಳ ಹಾಗೂ ಜಿಮ್ಗಳಲ್ಲಿ ಶೇ 50 ಮಂದಿಯೊಂದಿಗೆ ಕಾರ್ಯನಿರ್ವಹಿಸಬೇಕು. ಪಬ್, ಬಾರ್, ಕ್ಲಬ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಶೇ 50ರಷ್ಟು ಮಂದಿಗೆ ಆಸನ ವ್ಯವಸ್ಥೆ ಇರಬೇಕು’.</p>.<p>‘ಮಾಲ್, ಮಾರುಕಟ್ಟೆ,ಕಿರಾಣಿ ಅಂಗಡಿಗಳು ಸೇರಿದಂತೆ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆ ಸೇರಿದಂತೆ ಎಲ್ಲ ನಿಯಮಗಳನ್ನು ಕಡ್ಡಾಯವಾಗಿಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಅಂತಹ ಸ್ಥಳಗಳನ್ನು ಮುಚ್ಚಲಾಗುವುದು’.</p>.<p>‘ಸೂಚಿತ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ,ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 188ರಡಿ ಪ್ರಕರಣ ದಾಖಲಿಸಲಾಗುವುದು’ ಎಂದೂ ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕೋವಿಡ್ ನಿಯಂತ್ರಣಕ್ಕಾಗಿ ನಗರದಾದ್ಯಂತ ಕೋವಿಡ್ ನಿಯಮಾವಳಿ ಜಾರಿಯಲ್ಲಿದ್ದು, ಇದರನ್ವಯ ಏ.20ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.</p>.<p>‘ಈ ವೇಳೆ ನಗರದಲ್ಲಿ ಯಾವುದೇ ಗುಂಪು ಅಥವಾ ಸಂಘಟನೆಗಳು ಪ್ರತಿಭಟನೆ, ಧರಣಿ,ರ್ಯಾಲಿ, ಮುಷ್ಕರ ನಡೆಸುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದೂ ಎಚ್ಚರಿಸಿದ್ದಾರೆ.</p>.<p>‘ಧಾರ್ಮಿಕ ಸ್ಥಳಗಳಲ್ಲಿ ಗುಂಪು ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಕಾರ್ಯಕ್ರಮಗಳಲ್ಲೂ ಹೆಚ್ಚು ಜನ ಸೇರುವಂತಿಲ್ಲ. ಈಜುಕೊಳ ಹಾಗೂ ಜಿಮ್ಗಳಲ್ಲಿ ಶೇ 50 ಮಂದಿಯೊಂದಿಗೆ ಕಾರ್ಯನಿರ್ವಹಿಸಬೇಕು. ಪಬ್, ಬಾರ್, ಕ್ಲಬ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಶೇ 50ರಷ್ಟು ಮಂದಿಗೆ ಆಸನ ವ್ಯವಸ್ಥೆ ಇರಬೇಕು’.</p>.<p>‘ಮಾಲ್, ಮಾರುಕಟ್ಟೆ,ಕಿರಾಣಿ ಅಂಗಡಿಗಳು ಸೇರಿದಂತೆ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆ ಸೇರಿದಂತೆ ಎಲ್ಲ ನಿಯಮಗಳನ್ನು ಕಡ್ಡಾಯವಾಗಿಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಅಂತಹ ಸ್ಥಳಗಳನ್ನು ಮುಚ್ಚಲಾಗುವುದು’.</p>.<p>‘ಸೂಚಿತ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ,ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 188ರಡಿ ಪ್ರಕರಣ ದಾಖಲಿಸಲಾಗುವುದು’ ಎಂದೂ ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>