ಬೆಂಗಳೂರು: ‘ಸೀಲ್ಡೌನ್ ಪ್ರದೇಶಗಳಲ್ಲಿ ಆವಶ್ಯಕತೆ ಇರುವವರಿಗೆ ಆಹಾರ ಪದಾರ್ಥ ಮತ್ತು ಅಗತ್ಯ ದಿನಬಳಕೆ ವಸ್ತುಗಳನ್ನು ಪೂರೈಸುವುದು ಬಿಬಿಎಂಪಿ ಜವಾಬ್ದಾರಿ’ ಎಂದು ಹೈಕೋರ್ಟ್ ಹೇಳಿದೆ.
‘ಈ ಜವಾಬ್ದಾರಿ ನಿರ್ವಹಿಸುವಲ್ಲಿ ಬಿಬಿಎಂಪಿ ವಿಫಲವಾದರೆ ಸಾರ್ವಜನಿಕರ ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಲಿವೆ. ಬಾಧಿತರು ಬಿಬಿಎಂಪಿಯಿಂದ ಪರಿಹಾರ ಕೇಳುವ ಹಕ್ಕು ಪಡೆದಿರುತ್ತಾರೆ’ ಎಂದು ಎಚ್ಚರಿಕೆ ನೀಡಿದೆ.
‘ಈ ದಿಸೆಯಲ್ಲಿ ರಾಜ್ಯ ಸರ್ಕಾರವೂ ಮುಂದೆ ಬಂದು ವ್ಯವಸ್ಥೆ ಮಾಡಬೇಕು. ಇಲ್ಲವೇ ಬಿಬಿಎಂಪಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಸೂಚಿಸಿರುವ ನ್ಯಾಯಪೀಠ, ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿದೆ.