‘ಕೋವಿಡ್ ಹಲವು ಪಾಠಗಳನ್ನು ಕಲಿಸಿದೆ. ಆಯುಷ್ ವೈದ್ಯ ಪದ್ಧತಿಯಡಿ ಕಾರ್ಯನಿರ್ವಹಿಸುತ್ತಿರುವವರು ಕೋವಿಡ್ ನಿಯಂತ್ರಣಕ್ಕೆ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಕೆಲ ವೈದ್ಯರು ಒಂದು ದಿನವೂ ರಜೆ ಪಡೆಯದೆ ಸೇವೆ ಸಲ್ಲಿಸಿದ್ದಾರೆ. ಕಾಯಿಲೆ ಬಗ್ಗೆ ಭಯದ ಜತೆಗೆ ರೋಗನಿರೋಧಕ ಶಕ್ತಿಯ ಪ್ರಾಮುಖ್ಯತೆ ಬಗ್ಗೆ ಕೂಡ ಜನರಿಗೆ ಜಾಗೃತಿ ಮೂಡಿತು. ಇದರಿಂದಾಗಿ ಆಯುಷ್ ಉತ್ಪನ್ನಗಳಾದ ಕಷಾಯ, ಚೂರ್ಣಗಳನ್ನು ಸೇವಿಸಿ, ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿಕೊಂಡರು. ಯುನಾನಿಯಂತಹ ಸಾಂಪ್ರದಾಯಿಕ ಚಿಕಿತ್ಸಾ ವಿಧಾನಗಳಲ್ಲಿ ಇನ್ನಷ್ಟು ವೈಜ್ಞಾನಿಕ ಸಂಶೋಧನೆ ನಡೆಸಿ, ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವಾಗಬೇಕು’ ಎಂದರು.