ಬೆಂಗಳೂರು: ತುಮಕೂರು ರಸ್ತೆಯ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ(ಬಿಐಇಸಿ) 10,100 ಹಾಸಿಗೆಗಳ ಕೋವಿಡ್ ಸೋಂಕಿತರ ಆರೈಕೆ ಕೇಂದ್ರ ಸಿದ್ಧಗೊಂಡಿದೆ.
ದೇಶದಲ್ಲೇ ದೊಡ್ಡದಾದ ಈ ಆರೈಕೆ ಕೇಂದ್ರದ ತಯಾರಿಯನ್ನು ಶಾಸಕ ಎಸ್.ಆರ್. ವಿಶ್ವನಾಥ್, ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ಕುಮಾರ್, ಜಂಟಿ ಆಯುಕ್ತ ಸರ್ಫರಾಜ್ ಖಾನ್ ಭಾನುವಾರ ಪರಿಶೀಲಿಸಿದರು.
ಲಕ್ಷಣ ರಹಿತ ಸೋಂಕಿತರ ಚಿಕಿತ್ಸೆಗೆ ಇಲ್ಲಿ ವ್ಯವಸ್ಥೆ ಮಾಡಲಾಗಿದೆ. ಸೋಂಕಿತರ ಮನರಂಜನೆಗೆ ಎಲ್ಇಡಿ ಪರದೆಗಳನ್ನು ಅಳವಡಿಸಲಾಗಿದೆ. ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಆಮ್ಲಜನಕಯುಕ್ತ ಹಾಸಿಗೆಗಳ ಪ್ರತ್ಯೇಕ ವಿಭಾಗವೂ ಇಲ್ಲಿದೆ.
‘150 ವೈದ್ಯರು, ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ.ಗುಣಮಟ್ಟದ ಆಹಾರ ವ್ಯವಸ್ಥೆ, ಶೌಚಾಲಯ ಹಾಗೂ ಅಗತ್ಯ ಸೇವೆಗಳನ್ನು ಕಲ್ಪಿಸಲಾಗಿದೆ’ ಎಂದು ಆಯುಕ್ತ ಬಿ.ಎಚ್.ಅನಿಲ್ಕುಮಾರ್ ಟೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.