<p><strong>ಬೆಂಗಳೂರು:</strong> ‘ಕೋವಿಡ್ನಿಂದ ಎದುರಾಗಿರುವಕಷ್ಟವನ್ನು ರಾಜ್ಯದ ಇತರ ಜಿಲ್ಲೆಗಳ ಅಭಿವೃದ್ಧಿಗೆ ಒದಗಿದ ಅವಕಾಶ ಎಂದು ಭಾವಿಸಿಕೊಂಡರೆ ತಂತ್ರಜ್ಞಾನವನ್ನು, ಸಂಪನ್ಮೂಲವನ್ನು ಆ ನಿಟ್ಟಿನಲ್ಲಿ ಬಳಸಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ನಗರದ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ (ಐಐಐಟಿ–ಬಿ) ನಿರ್ದೇಶಕ ಪ್ರೊ.ಎಸ್.ಸಡಗೋಪನ್ ಹೇಳಿದರು.</p>.<p>‘ಕೋವಿಡ್ನಿಂದ ಮನೆಯಿಂದಲೇ ಕೆಲಸದ ಪರಿಕಲ್ಪನೆ ಬಹುತೇಕ ಕಂಪನಿಗಳಲ್ಲಿ ಸಾಮಾನ್ಯವಾಗಿದೆ. ಇಂತಹ ಕೆಲಸ ಬಾಗಲಕೋಟೆಯಿಂದಲೂ ಮಾಡಬಹುದು, ಮಂಡ್ಯದಿಂದಲೂ ಮಾಡಬಹುದು. ಬೆಂಗಳೂರಿನ ದಟ್ಟಣೆ ಕಡಿಮೆಯಾಗುತ್ತದೆ. ಬೆಂಗಳೂರಿಗೆ ಹಾಕುವ ಬಂಡವಾಳ ಜಿಲ್ಲೆಗಳಿಗೆ ಹರಿಯುತ್ತದೆ. ಈ ಅವಕಾಶವನ್ನು ಜಾಣ್ಮೆಯಿಂದ ಬಳಸಿಕೊಂಡರೆ ನಾಡಿನ ಸರ್ವಾಂಗೀಣ ಅಭಿವೃದ್ಧಿ ನಿಶ್ಚಿತ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಭಾನುವಾರ ಸಂಸ್ಥೆಯ 20ನೇ ಘಟಿಕೋತ್ಸವದ ಹಿನ್ನೆಲೆಯಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡರು. ಇದುವರೆಗೆ ಪದವೀಧರರಾದ ಈ ಸಂಸ್ಥೆಯ ಎಲ್ಲ 3,289 ಮಂದಿಗೂ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ದೊರೆತಿದೆ. ಕೆಲವರು ಯಶಸ್ವಿ ಉದ್ಯಮಿಗಳಾಗಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೋವಿಡ್ನಿಂದ ಎದುರಾಗಿರುವಕಷ್ಟವನ್ನು ರಾಜ್ಯದ ಇತರ ಜಿಲ್ಲೆಗಳ ಅಭಿವೃದ್ಧಿಗೆ ಒದಗಿದ ಅವಕಾಶ ಎಂದು ಭಾವಿಸಿಕೊಂಡರೆ ತಂತ್ರಜ್ಞಾನವನ್ನು, ಸಂಪನ್ಮೂಲವನ್ನು ಆ ನಿಟ್ಟಿನಲ್ಲಿ ಬಳಸಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ನಗರದ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ (ಐಐಐಟಿ–ಬಿ) ನಿರ್ದೇಶಕ ಪ್ರೊ.ಎಸ್.ಸಡಗೋಪನ್ ಹೇಳಿದರು.</p>.<p>‘ಕೋವಿಡ್ನಿಂದ ಮನೆಯಿಂದಲೇ ಕೆಲಸದ ಪರಿಕಲ್ಪನೆ ಬಹುತೇಕ ಕಂಪನಿಗಳಲ್ಲಿ ಸಾಮಾನ್ಯವಾಗಿದೆ. ಇಂತಹ ಕೆಲಸ ಬಾಗಲಕೋಟೆಯಿಂದಲೂ ಮಾಡಬಹುದು, ಮಂಡ್ಯದಿಂದಲೂ ಮಾಡಬಹುದು. ಬೆಂಗಳೂರಿನ ದಟ್ಟಣೆ ಕಡಿಮೆಯಾಗುತ್ತದೆ. ಬೆಂಗಳೂರಿಗೆ ಹಾಕುವ ಬಂಡವಾಳ ಜಿಲ್ಲೆಗಳಿಗೆ ಹರಿಯುತ್ತದೆ. ಈ ಅವಕಾಶವನ್ನು ಜಾಣ್ಮೆಯಿಂದ ಬಳಸಿಕೊಂಡರೆ ನಾಡಿನ ಸರ್ವಾಂಗೀಣ ಅಭಿವೃದ್ಧಿ ನಿಶ್ಚಿತ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಭಾನುವಾರ ಸಂಸ್ಥೆಯ 20ನೇ ಘಟಿಕೋತ್ಸವದ ಹಿನ್ನೆಲೆಯಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡರು. ಇದುವರೆಗೆ ಪದವೀಧರರಾದ ಈ ಸಂಸ್ಥೆಯ ಎಲ್ಲ 3,289 ಮಂದಿಗೂ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ದೊರೆತಿದೆ. ಕೆಲವರು ಯಶಸ್ವಿ ಉದ್ಯಮಿಗಳಾಗಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>