<p><strong>ಬೆಂಗಳೂರು:</strong> ಹೋಟೆಲ್ ಸ್ವಾಗತಕಾರ ಕೆಲಸದಿಂದ ತೆಗೆದಿದ್ದರಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾದ ಆರೋಪಿ ಅಮೀರ್ ಅಹಮ್ಮದ್ (28) ಎಂಬಾತನನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ಅಗ್ರಹಾರ ಬಡಾವಣೆಯ ತಿರುಮಲಹಳ್ಳಿ ಮುಖ್ಯರಸ್ತೆ ನಿವಾಸಿಯಾದ ಅಮೀರ್, ಲಾಕ್ಡೌನ್ನಿಂದಾಗಿ ಕೆಲಸ ಕಳೆದುಕೊಂಡಿದ್ದ. ನಂತರ ಹೆಚ್ಚಿನ ಹಣ ಸಂಪಾದನೆಗಾಗಿ ಗಾಂಜಾ ಮಾರಾಟ ಮಾಡಲಾರಂಭಿಸಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಬ್ಯಾಗ್ಗಳಲ್ಲಿ ಗಾಂಜಾ ಪೊಟ್ಟಣಗಳನ್ನು ತುಂಬಿಕೊಂಡು ಬಂದಿದ್ದ ಆರೋಪಿ, ಪೀಣ್ಯ 2ನೇ ಹಂತದಲ್ಲಿ ಕಾಣಿಸಿಕೊಂಡಿದ್ದ. ಆತನ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ದಾಳಿ ಮಾಡಿ ಬಂಧಿಸಲಾಯಿತು. 20 ಕೆ.ಜಿ ಗಾಂಜಾ ಹಾಗೂ 30 ಸಾವಿರ ನಗದು ಜಪ್ತಿ ಮಾಡಲಾಯಿತು’ ಎಂದೂ ತಿಳಿಸಿದರು.</p>.<p>‘ಪರಿಚಯಸ್ಥರೊಬ್ಬರ ಮೂಲಕ ಆಂಧ್ರಪ್ರದೇಶದಿಂದ ಗಾಂಜಾ ತರುತ್ತಿದ್ದ ಆರೋಪಿ, ನಗರದಲ್ಲಿ ಕೆಲ ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಆತ ತಪ್ಪೊಪ್ಪಿಕೊಂಡಿದ್ದಾನೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೋಟೆಲ್ ಸ್ವಾಗತಕಾರ ಕೆಲಸದಿಂದ ತೆಗೆದಿದ್ದರಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾದ ಆರೋಪಿ ಅಮೀರ್ ಅಹಮ್ಮದ್ (28) ಎಂಬಾತನನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ಅಗ್ರಹಾರ ಬಡಾವಣೆಯ ತಿರುಮಲಹಳ್ಳಿ ಮುಖ್ಯರಸ್ತೆ ನಿವಾಸಿಯಾದ ಅಮೀರ್, ಲಾಕ್ಡೌನ್ನಿಂದಾಗಿ ಕೆಲಸ ಕಳೆದುಕೊಂಡಿದ್ದ. ನಂತರ ಹೆಚ್ಚಿನ ಹಣ ಸಂಪಾದನೆಗಾಗಿ ಗಾಂಜಾ ಮಾರಾಟ ಮಾಡಲಾರಂಭಿಸಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಬ್ಯಾಗ್ಗಳಲ್ಲಿ ಗಾಂಜಾ ಪೊಟ್ಟಣಗಳನ್ನು ತುಂಬಿಕೊಂಡು ಬಂದಿದ್ದ ಆರೋಪಿ, ಪೀಣ್ಯ 2ನೇ ಹಂತದಲ್ಲಿ ಕಾಣಿಸಿಕೊಂಡಿದ್ದ. ಆತನ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ದಾಳಿ ಮಾಡಿ ಬಂಧಿಸಲಾಯಿತು. 20 ಕೆ.ಜಿ ಗಾಂಜಾ ಹಾಗೂ 30 ಸಾವಿರ ನಗದು ಜಪ್ತಿ ಮಾಡಲಾಯಿತು’ ಎಂದೂ ತಿಳಿಸಿದರು.</p>.<p>‘ಪರಿಚಯಸ್ಥರೊಬ್ಬರ ಮೂಲಕ ಆಂಧ್ರಪ್ರದೇಶದಿಂದ ಗಾಂಜಾ ತರುತ್ತಿದ್ದ ಆರೋಪಿ, ನಗರದಲ್ಲಿ ಕೆಲ ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಆತ ತಪ್ಪೊಪ್ಪಿಕೊಂಡಿದ್ದಾನೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>