ರಾಜ್ಯದ ಗಡಿಗಳನ್ನು ಬಂದ್ ಮಾಡಲಾಗಿದ್ದರೂ ಆ್ಯಂಬುಲೆನ್ಸ್, ಔಷಧಿ ಪೂರೈಕೆ ವಾಹನಗಳ ಪ್ರವೇಶಕ್ಕೆ ಅಡ್ಡಿಯಿಲ್ಲ. ಆದರೆ,ಕಚ್ಚಾ ಪದಾರ್ಥಗಳ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದರಿಂದ ಔಷಧಿಗಳ ತಯಾರಿಕೆಯಲ್ಲಿ ಅರ್ಧದಷ್ಟು ಕುಸಿತವಾಗಿದೆ. ಇನ್ನೊಂದೆಡೆ, ಮಧುಮೇಹ, ಅಧಿಕ ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆಗೆ ನಿಯಮಿತವಾಗಿ ಮಾತ್ರೆ ತೆಗೆದುಕೊಳ್ಳುವವರು ಆತಂಕದಿಂದ ಅಧಿಕ ಪ್ರಮಾಣದಲ್ಲಿ ಔಷಧಿಗಳನ್ನು ಖರೀದಿಸಲು ಪ್ರಾರಂಭಿಸಿದ್ದಾರೆ.