<p><strong>ಬೆಂಗಳೂರು: </strong>ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಭಾನುವಾರವೂ ಗೊಂದಲ ಮುಂದುವರಿಯಿತು. ಮೂರ್ತಿಗಳ ವಿಸರ್ಜನೆಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಭಕ್ತರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮೂರನೇ ದಿನ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಗಣೇಶೋತ್ಸವ ಸಮಿತಿಗಳು ಸಿದ್ಧತೆ ಮಾಡಿಕೊಂಡಿದ್ದವು. ಆದರೆ, ಈ ನಿಟ್ಟಿನಲ್ಲಿ ಸಂಘ- ಸಂಸ್ಥೆಗಳಿಗೆ ಅನುಮತಿ ಪಡೆಯುವುದಕ್ಕೆ ಸಂಬಂಧಿಸಿದ ಗೊಂದಲ ಬಗೆಹರಿದಿಲ್ಲ.</p>.<p>‘ಮೂರ್ತಿ ವಿಸರ್ಜನೆಗೆ ಆಯಾ ವಾರ್ಡ್ನಲ್ಲಿ ಎಲ್ಲೆಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿಯು ಸರಿಯಾಗಿ ಸಿಗುತ್ತಿಲ್ಲ. ಮೂರ್ತಿಗಳ ಪ್ರತಿಷ್ಠಾಪನೆಯಿಂದ ವಿಸರ್ಜನೆಯವರೆಗೆ ಗೊಂದಲಗಳು ಮುಂದುವರಿದಿವೆ’ ಎಂದು ಅನೇಕರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಒಂದು ಬಡಾವಣೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಮೂರ್ತಿಗಳನ್ನು ಪ್ರತಿಷ್ಠಾಪಿಸುತ್ತಿದ್ದೆವು. ಈ ಬಾರಿ ಕೇವಲ ಒಂದೆರಡು ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸುವಂತಾಗಿದೆ’ ಎಂದರು.</p>.<p>ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯ ಪದಾಧಿಕಾರಿಗಳ ತಂಡವು ಹೆಬ್ಬಾಳ, ಯಲಹಂಕದ ಅಟ್ಟೂರು ಕೆರೆ ಸೇರಿದಂತೆ ಕೆರೆಗಳನ್ನು ವೀಕ್ಷಿಸಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿತು.</p>.<p class="Subhead">ಮುಖ್ಯಮಂತ್ರಿಗೆ ದೂರು: ‘ಗಣೇಶೋತ್ಸವ ಆಚರಣೆಗೆ ಅನುಮತಿ ಪಡೆಯುವ ಸಂಬಂಧ ಏಕಗವಾಕ್ಷಿ ವ್ಯವಸ್ಥೆ ರೂಪಿಸಬೇಕು ಎಂದು ಬಿಬಿಎಂಪಿಗೆ ಕೇಳಿದ್ದೆವು. ಈ ನಿಟ್ಟಿನಲ್ಲಿ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ನೇರವಾಗಿ ಮುಖ್ಯಮಂತ್ರಿಗೆ ದೂರು ಸಲ್ಲಿಸಲು ನಿರ್ಧರಿಸಿದ್ದೇವೆ’ ಎಂದು ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಜು ತಿಳಿಸಿದರು.</p>.<p>‘ನಾನಾ ಸಂಘ-ಸಂಸ್ಥೆಗಳು ಶುಕ್ರವಾರದವರೆಗೆ ಗಣೇಶೋತ್ಸವ ನಡೆಸಲು ನಿರ್ಧರಿಸಿವೆ. ರಾಜ್ಯ ಸರ್ಕಾರವು ಸೋಮವಾರದವರೆಗೆ (ಸೆ.20) ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು. ಪೊಲೀಸರಾಗಲಿ, ಬಿಬಿಎಂಪಿ ಸಿಬ್ಬಂದಿಯಾಗಲಿ ಗಣೇಶೋತ್ಸವಕ್ಕೆ ಅಡ್ಡಿಪಡಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಯವರು ಸೂಕ್ತ ಆದೇಶ ನೀಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಭಾನುವಾರವೂ ಗೊಂದಲ ಮುಂದುವರಿಯಿತು. ಮೂರ್ತಿಗಳ ವಿಸರ್ಜನೆಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಭಕ್ತರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮೂರನೇ ದಿನ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಗಣೇಶೋತ್ಸವ ಸಮಿತಿಗಳು ಸಿದ್ಧತೆ ಮಾಡಿಕೊಂಡಿದ್ದವು. ಆದರೆ, ಈ ನಿಟ್ಟಿನಲ್ಲಿ ಸಂಘ- ಸಂಸ್ಥೆಗಳಿಗೆ ಅನುಮತಿ ಪಡೆಯುವುದಕ್ಕೆ ಸಂಬಂಧಿಸಿದ ಗೊಂದಲ ಬಗೆಹರಿದಿಲ್ಲ.</p>.<p>‘ಮೂರ್ತಿ ವಿಸರ್ಜನೆಗೆ ಆಯಾ ವಾರ್ಡ್ನಲ್ಲಿ ಎಲ್ಲೆಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿಯು ಸರಿಯಾಗಿ ಸಿಗುತ್ತಿಲ್ಲ. ಮೂರ್ತಿಗಳ ಪ್ರತಿಷ್ಠಾಪನೆಯಿಂದ ವಿಸರ್ಜನೆಯವರೆಗೆ ಗೊಂದಲಗಳು ಮುಂದುವರಿದಿವೆ’ ಎಂದು ಅನೇಕರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಒಂದು ಬಡಾವಣೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಮೂರ್ತಿಗಳನ್ನು ಪ್ರತಿಷ್ಠಾಪಿಸುತ್ತಿದ್ದೆವು. ಈ ಬಾರಿ ಕೇವಲ ಒಂದೆರಡು ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸುವಂತಾಗಿದೆ’ ಎಂದರು.</p>.<p>ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯ ಪದಾಧಿಕಾರಿಗಳ ತಂಡವು ಹೆಬ್ಬಾಳ, ಯಲಹಂಕದ ಅಟ್ಟೂರು ಕೆರೆ ಸೇರಿದಂತೆ ಕೆರೆಗಳನ್ನು ವೀಕ್ಷಿಸಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿತು.</p>.<p class="Subhead">ಮುಖ್ಯಮಂತ್ರಿಗೆ ದೂರು: ‘ಗಣೇಶೋತ್ಸವ ಆಚರಣೆಗೆ ಅನುಮತಿ ಪಡೆಯುವ ಸಂಬಂಧ ಏಕಗವಾಕ್ಷಿ ವ್ಯವಸ್ಥೆ ರೂಪಿಸಬೇಕು ಎಂದು ಬಿಬಿಎಂಪಿಗೆ ಕೇಳಿದ್ದೆವು. ಈ ನಿಟ್ಟಿನಲ್ಲಿ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ನೇರವಾಗಿ ಮುಖ್ಯಮಂತ್ರಿಗೆ ದೂರು ಸಲ್ಲಿಸಲು ನಿರ್ಧರಿಸಿದ್ದೇವೆ’ ಎಂದು ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಜು ತಿಳಿಸಿದರು.</p>.<p>‘ನಾನಾ ಸಂಘ-ಸಂಸ್ಥೆಗಳು ಶುಕ್ರವಾರದವರೆಗೆ ಗಣೇಶೋತ್ಸವ ನಡೆಸಲು ನಿರ್ಧರಿಸಿವೆ. ರಾಜ್ಯ ಸರ್ಕಾರವು ಸೋಮವಾರದವರೆಗೆ (ಸೆ.20) ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು. ಪೊಲೀಸರಾಗಲಿ, ಬಿಬಿಎಂಪಿ ಸಿಬ್ಬಂದಿಯಾಗಲಿ ಗಣೇಶೋತ್ಸವಕ್ಕೆ ಅಡ್ಡಿಪಡಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಯವರು ಸೂಕ್ತ ಆದೇಶ ನೀಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>