ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಎಲ್ಲರಿಗೂ ತಲಾ 10 ಕೆ.ಜಿ. ಅಕ್ಕಿ, ಬೇಳೆ, ಅಡುಗೆ ಎಣ್ಣೆ ಸೇರಿದಂತೆ ದಿನಸಿ ವಿತರಿಸಬೇಕು. ನಿರುದ್ಯೋಗಿ ವಲಸಿಗರಿಗೆ ಉದ್ಯೋಗ ಕಲ್ಪಿಸಲು ನರೇಗಾ ಯೋಜನೆಯಡಿ ಕನಿಷ್ಠ ಕೂಲಿ ಮತ್ತು ಕೆಲಸದ ದಿನಗಳನ್ನು ಹೆಚ್ಚಿಸಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ‘ಕರ ನಿರಾಕರಣ ಚಳವಳಿ’ ನಡೆಸಲಾಗುವುದು’ ಎಂದು ಎಚ್ಚರಿಸಿದರು.