ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ‘ಸಾರ್ವಜನಿಕ ಆರೋಗ್ಯ ರಕ್ಷಣೆಯ ಉದ್ದೇಶದಿಂದಲೇಪ್ರತಿಬಂಧಗಳನ್ನು ಜಾರಿಗೊಳಿಸಲಾಗುತ್ತದೆ. ಅವುಗಳನ್ನು ಸಂಪೂರ್ಣ ತೆರವುಗೊಳಿಸುವ ಮುನ್ನ ಕೋವಿಡ್ ಎಷ್ಟರಮಟ್ಟಿಗೆ ಹತೋಟಿಗೆ ಬಂದಿವೆ ಎಂಬುದನ್ನು ಪರಿಗಣಿಸಬೇಕಾಗುತ್ತದೆ. ನಗರದಲ್ಲಿ ಕೋವಿಡ್ ಸೊಂಕು ಹರಡುವಿಕೆ ಸದ್ಯ ನಿಯಂತ್ರಣಕ್ಕೆ ಬಂದಿದೆ. ಆದರೂ ಈಗಲೂ ರಾತ್ರಿ ಕರ್ಫ್ಯೂ ಮುಂದುವರೆದಿದೆ. ಅದನ್ನೂ ಕೈಬಿಡುವ ಮುನ್ನ ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ’ ಎಂದರು.