‘ಸೋಂಕು ದೃಢಪಟ್ಟಿರುವವರ ಮನೆಗಳನ್ನು ಸೀಲ್ ಮಾಡಲಾಗಿದೆ. ವಾರ್ಡ್ನ ಬಡಾವಣೆಗಳಲ್ಲಿ ಸೋಂಕು ಮುಕ್ತ ದ್ರಾವಣ ಸಿಂಪಡಿಸಲಾಗುತ್ತಿದೆ. ಈ ಪ್ರದೇಶಗಳಲ್ಲಿ ಹೆಚ್ಚು ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಅಲ್ಲದೆ, ಜನರಲ್ಲಿ ಅರಿವು ಮೂಡಿಸಲು ಆಟೊ ಮೂಲಕ ಪ್ರಚಾರ ಮಾಡಲಾಗುತ್ತಿದೆ’ ಎಂದು ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಡಾ. ಕಲ್ಪನಾ ತಿಳಿಸಿದರು.