<p><strong>ಬೆಂಗಳೂರು: </strong>ಯಲಹಂಕ ವಲಯ ವ್ಯಾಪ್ತಿಯ ಕುವೆಂಪುನಗರ ವಾರ್ಡ್ ವ್ಯಾಪ್ತಿಯಲ್ಲಿ ಬಿಬಿಎಂಪಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಮನೆ ಮನೆ ಸಮೀಕ್ಷೆ ನಡೆಸಿದರು.</p>.<p>ವಾರ್ಡ್ನ ಸಿಂಗಾಪುರ, ಶ್ರೀನಿಧಿ ಹಾಗೂ ಸೋಮಣ್ಣ ಬಡಾವಣೆಗಳಲ್ಲಿ ಜನರಿಗೆ ಕೋವಿಡ್ ಪರೀಕ್ಷೆಯನ್ನೂ ನಡೆಸಲಾಯಿತು. ಪರೀಕ್ಷೆಗೆ ಒಳಪಟ್ಟವರ ಪೈಕಿ 20 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿತು. ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನೂ ಪರೀಕ್ಷೆಗೆ ಒಳಪಡಿಸಲಾಯಿತು.</p>.<p>ಸೋಂಕಿನ ಲಕ್ಷಣಗಳ ಬಗ್ಗೆ ಮತ್ತು ಅದಕ್ಕೆ ತೆಗೆದುಕೊಳ್ಳಬಹುದಾದ ಚಿಕಿತ್ಸೆ ಹಾಗೂ ಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು.</p>.<p>‘ಸೋಂಕು ದೃಢಪಟ್ಟಿರುವವರ ಮನೆಗಳನ್ನು ಸೀಲ್ ಮಾಡಲಾಗಿದೆ. ವಾರ್ಡ್ನ ಬಡಾವಣೆಗಳಲ್ಲಿ ಸೋಂಕು ಮುಕ್ತ ದ್ರಾವಣ ಸಿಂಪಡಿಸಲಾಗುತ್ತಿದೆ. ಈ ಪ್ರದೇಶಗಳಲ್ಲಿ ಹೆಚ್ಚು ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಅಲ್ಲದೆ, ಜನರಲ್ಲಿ ಅರಿವು ಮೂಡಿಸಲು ಆಟೊ ಮೂಲಕ ಪ್ರಚಾರ ಮಾಡಲಾಗುತ್ತಿದೆ’ ಎಂದು ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಡಾ. ಕಲ್ಪನಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಯಲಹಂಕ ವಲಯ ವ್ಯಾಪ್ತಿಯ ಕುವೆಂಪುನಗರ ವಾರ್ಡ್ ವ್ಯಾಪ್ತಿಯಲ್ಲಿ ಬಿಬಿಎಂಪಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಮನೆ ಮನೆ ಸಮೀಕ್ಷೆ ನಡೆಸಿದರು.</p>.<p>ವಾರ್ಡ್ನ ಸಿಂಗಾಪುರ, ಶ್ರೀನಿಧಿ ಹಾಗೂ ಸೋಮಣ್ಣ ಬಡಾವಣೆಗಳಲ್ಲಿ ಜನರಿಗೆ ಕೋವಿಡ್ ಪರೀಕ್ಷೆಯನ್ನೂ ನಡೆಸಲಾಯಿತು. ಪರೀಕ್ಷೆಗೆ ಒಳಪಟ್ಟವರ ಪೈಕಿ 20 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿತು. ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನೂ ಪರೀಕ್ಷೆಗೆ ಒಳಪಡಿಸಲಾಯಿತು.</p>.<p>ಸೋಂಕಿನ ಲಕ್ಷಣಗಳ ಬಗ್ಗೆ ಮತ್ತು ಅದಕ್ಕೆ ತೆಗೆದುಕೊಳ್ಳಬಹುದಾದ ಚಿಕಿತ್ಸೆ ಹಾಗೂ ಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು.</p>.<p>‘ಸೋಂಕು ದೃಢಪಟ್ಟಿರುವವರ ಮನೆಗಳನ್ನು ಸೀಲ್ ಮಾಡಲಾಗಿದೆ. ವಾರ್ಡ್ನ ಬಡಾವಣೆಗಳಲ್ಲಿ ಸೋಂಕು ಮುಕ್ತ ದ್ರಾವಣ ಸಿಂಪಡಿಸಲಾಗುತ್ತಿದೆ. ಈ ಪ್ರದೇಶಗಳಲ್ಲಿ ಹೆಚ್ಚು ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಅಲ್ಲದೆ, ಜನರಲ್ಲಿ ಅರಿವು ಮೂಡಿಸಲು ಆಟೊ ಮೂಲಕ ಪ್ರಚಾರ ಮಾಡಲಾಗುತ್ತಿದೆ’ ಎಂದು ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಡಾ. ಕಲ್ಪನಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>