<p><strong>ಬೆಂಗಳೂರು:</strong> ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್ಐ) ಹಾಗೂ ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಎದುರಿಸುತ್ತಿರುವವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚಿಸಿದೆ.</p>.<p>ಈ ಸಂಬಂಧ ಆರೋಗ್ಯ ಇಲಾಖೆ ನಿರ್ದೇಶಕ ಡಾ. ಓಂಪ್ರಕಾಶ್ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ. ಐಎಲ್ಐ ಹಾಗೂ ಸಾರಿ ಸಮಸ್ಯೆ ಎದುರಿಸುತ್ತಿರುವವರಿಗೆ ಕೋವಿಡ್ ಅಪಾಯವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಈ ರೀತಿ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಬಂದವರಿಗೆ ಖಾಸಗಿ ಆಸ್ಪತ್ರೆಗಳು ಕೋವಿಡ್ ಪರೀಕ್ಷೆ ನಡೆಸದಿರುವುದು ಹಾಗೂ ಸರ್ಕಾರದ ಪೋರ್ಟಲ್ನಲ್ಲಿ ಮಾಹಿತಿ ದಾಖಲಿಸದಿರುವುದು ಗಮನಕ್ಕೆ ಬಂದಿದೆ. ಇದರಿಂದ ಕೋವಿಡ್ ಪ್ರಕರಣಗಳು ತಡವಾಗಿ ವರದಿಯಾಗಿ, ಮರಣಗಳು ಸಂಭವಿಸುತ್ತಿವೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಆಸ್ಪತ್ರೆಯೊಳಗೆ ಪರೀಕ್ಷೆಯ ವ್ಯವಸ್ಥೆಯಿದ್ದಲ್ಲಿ ಸರ್ಕಾರ ನಿಗದಿಪಡಿಸಿದ ದರದಲ್ಲಿ ಪರಿಕ್ಷೆ ನಡೆಸಬೇಕು. ಇಲ್ಲವಾದಲ್ಲಿ ಅವರ ಗಂಟಲ ದ್ರವದ ಮಾದರಿ ಪಡೆದು, ಪ್ರಯೋಗಾಲಯಗಳಿಗೆ ರವಾನಿಸಬೇಕು. ಮಾದರಿ ಸಂಗ್ರಹಕ್ಕೆ ₹ 200 ನಿಗದಿಪಡಿಸಬಹುದು. ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ದರಗಳು ಅನ್ವಯವಾಗಲಿದೆ ಎಂದು ಸೂಚಿಸಿದ್ದಾರೆ.</p>.<p>ಕೋವಿಡ್ಗೆ ಸಂಬಂಧಿಸಿದ ಮಾಹಿತಿಗಳನ್ನು ಒದಗಿಸಲು ಅಭಿವೃದ್ಧಿಪಡಿಸಿರುವ ಪೋರ್ಟಲ್ ಹಾಗೂ ಆ್ಯಪ್ನಲ್ಲಿ ಖಾಸಗಿ ಆಸ್ಪತ್ರೆಗಳು ಸಮರ್ಪಕವಾಗಿ ವಿವರಗಳನ್ನು ನಮೂದಿಸುತ್ತಿಲ್ಲ. ಹಾಸಿಗೆ ವಿವರ, ರೆಫರಲ್ ಚಿಕಿತ್ಸೆ ಸೇರಿದಂತೆ ವಿವಿಧ ಮಾಹಿತಿಗಳನ್ನು ನೀಡದಿದ್ದಲ್ಲಿ ಕಾನೂನಿನ ಅಡಿ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್ಐ) ಹಾಗೂ ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಎದುರಿಸುತ್ತಿರುವವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚಿಸಿದೆ.</p>.<p>ಈ ಸಂಬಂಧ ಆರೋಗ್ಯ ಇಲಾಖೆ ನಿರ್ದೇಶಕ ಡಾ. ಓಂಪ್ರಕಾಶ್ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ. ಐಎಲ್ಐ ಹಾಗೂ ಸಾರಿ ಸಮಸ್ಯೆ ಎದುರಿಸುತ್ತಿರುವವರಿಗೆ ಕೋವಿಡ್ ಅಪಾಯವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಈ ರೀತಿ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಬಂದವರಿಗೆ ಖಾಸಗಿ ಆಸ್ಪತ್ರೆಗಳು ಕೋವಿಡ್ ಪರೀಕ್ಷೆ ನಡೆಸದಿರುವುದು ಹಾಗೂ ಸರ್ಕಾರದ ಪೋರ್ಟಲ್ನಲ್ಲಿ ಮಾಹಿತಿ ದಾಖಲಿಸದಿರುವುದು ಗಮನಕ್ಕೆ ಬಂದಿದೆ. ಇದರಿಂದ ಕೋವಿಡ್ ಪ್ರಕರಣಗಳು ತಡವಾಗಿ ವರದಿಯಾಗಿ, ಮರಣಗಳು ಸಂಭವಿಸುತ್ತಿವೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಆಸ್ಪತ್ರೆಯೊಳಗೆ ಪರೀಕ್ಷೆಯ ವ್ಯವಸ್ಥೆಯಿದ್ದಲ್ಲಿ ಸರ್ಕಾರ ನಿಗದಿಪಡಿಸಿದ ದರದಲ್ಲಿ ಪರಿಕ್ಷೆ ನಡೆಸಬೇಕು. ಇಲ್ಲವಾದಲ್ಲಿ ಅವರ ಗಂಟಲ ದ್ರವದ ಮಾದರಿ ಪಡೆದು, ಪ್ರಯೋಗಾಲಯಗಳಿಗೆ ರವಾನಿಸಬೇಕು. ಮಾದರಿ ಸಂಗ್ರಹಕ್ಕೆ ₹ 200 ನಿಗದಿಪಡಿಸಬಹುದು. ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ದರಗಳು ಅನ್ವಯವಾಗಲಿದೆ ಎಂದು ಸೂಚಿಸಿದ್ದಾರೆ.</p>.<p>ಕೋವಿಡ್ಗೆ ಸಂಬಂಧಿಸಿದ ಮಾಹಿತಿಗಳನ್ನು ಒದಗಿಸಲು ಅಭಿವೃದ್ಧಿಪಡಿಸಿರುವ ಪೋರ್ಟಲ್ ಹಾಗೂ ಆ್ಯಪ್ನಲ್ಲಿ ಖಾಸಗಿ ಆಸ್ಪತ್ರೆಗಳು ಸಮರ್ಪಕವಾಗಿ ವಿವರಗಳನ್ನು ನಮೂದಿಸುತ್ತಿಲ್ಲ. ಹಾಸಿಗೆ ವಿವರ, ರೆಫರಲ್ ಚಿಕಿತ್ಸೆ ಸೇರಿದಂತೆ ವಿವಿಧ ಮಾಹಿತಿಗಳನ್ನು ನೀಡದಿದ್ದಲ್ಲಿ ಕಾನೂನಿನ ಅಡಿ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>