‘ಮಂಗಳವಾರ ನಡೆದ ಮತದಾನದ ವೇಳೆ ಪ್ರಿಸೈಡಿಂಗ್ ಅಧಿಕಾರಿಗಳು, ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ಸಹಾಯಕ ಸಿಬ್ಬಂದಿ, ಭದ್ರತಾ ಸಿಬ್ಬಂದಿಗಳಾಗಿ ಕರ್ತವ್ಯ ನಿರ್ವಹಿಸಿದ ಬಹುತೇಕರು ಈ ಕ್ಷೇತ್ರದ ಹೊರಗಿನವರು. ಮುಂಜಾಗ್ರತಾ ದೃಷ್ಟಿಯಿಂದ ಅವರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ’ ಎಂದು ಆರ್.ಆರ್.ನಗರ ವಲಯದ ಉಸ್ತುವಾರಿ ಹೊತ್ತಿರುವ ವಿಶೇಷ ಆಯುಕ್ತ ಜೆ.ಮಂಜುನಾಥ್ ಅಭಿಪ್ರಾಯಪಟ್ಟರು.