<p><strong>ಬೆಂಗಳೂರು:</strong> ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಬಿಬಿಂಎಂಪಿ ಸಲಹೆ ನೀಡಿದೆ.</p>.<p>‘ಈ ಕ್ಷೇತ್ರದಲ್ಲಿ ಬಿಬಿಎಂಪಿ ಸಿಬ್ಬಂದಿ ಒಂದು ತಿಂಗಳಿನಿಂದ ಚುನಾವಣೆ ಕರ್ತವ್ಯದಲ್ಲಿ ತೊಡಗಿದ್ದರು. ಸೋಂಕು ಹರಡದಂತೆ ನಾವು ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದೆವು. ಆದರೂ ಸುರಕ್ಷತೆಯ ದೃಷ್ಟಿಯಿಂದ ಈ ಸಿಬ್ಬಂದಿಗಳೆಲ್ಲರೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಅವರು ಪರೀಕ್ಷೆ ಮಾಡಿಸಿಕೊಳ್ಳಲು ಶುಕ್ರವಾರದಿಂದ ಸೋಮವಾರದವರೆಗೆ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದೇನೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಮಂಗಳವಾರ ನಡೆದ ಮತದಾನದ ವೇಳೆ ಪ್ರಿಸೈಡಿಂಗ್ ಅಧಿಕಾರಿಗಳು, ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ಸಹಾಯಕ ಸಿಬ್ಬಂದಿ, ಭದ್ರತಾ ಸಿಬ್ಬಂದಿಗಳಾಗಿ ಕರ್ತವ್ಯ ನಿರ್ವಹಿಸಿದ ಬಹುತೇಕರು ಈ ಕ್ಷೇತ್ರದ ಹೊರಗಿನವರು. ಮುಂಜಾಗ್ರತಾ ದೃಷ್ಟಿಯಿಂದ ಅವರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ’ ಎಂದು ಆರ್.ಆರ್.ನಗರ ವಲಯದ ಉಸ್ತುವಾರಿ ಹೊತ್ತಿರುವ ವಿಶೇಷ ಆಯುಕ್ತ ಜೆ.ಮಂಜುನಾಥ್ ಅಭಿಪ್ರಾಯಪಟ್ಟರು.</p>.<p>ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಭ್ಯರ್ಥಿಗಳು ಅಂತರ ಕಾಪಾಡಿರಲಿಲ್ಲ. ಚುನಾವಣಾ ಪ್ರಚಾರ ಸಭೆಗಳಲ್ಲಿ ಸೇರಬಹುದಾದ ಜನರ ಸಂಖ್ಯೆಗೆ ಆಯೋಗ ಮಿತಿ ನಿಗದಿಪಡಿಸಿತ್ತಾದರೂ ಅದನ್ನೂ ಮೀರಿ ಸೂರಾರು ಸಂಖ್ಯೆಯಲ್ಲಿ ಜನ ಗುಂಪುಗೂಡಿದ್ದರು.</p>.<p>ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ಚುನಾವಣೆ ಸಮೀಪಿಸುತ್ತಿದ್ದಂತೆ ಈ ಕ್ಷೇತ್ರದಲ್ಲಿ ಕೋವಿಡ್ ಪರೀಕ್ಷೆ ಪ್ರಮಾಣವನ್ನೂ ಬಿಬಿಎಂಪಿ ಹೆಚ್ಚಿಸಿತ್ತು. ಕೋವಿಡ್ ಪರೀಕ್ಷೆ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.</p>.<p>‘ಕ್ಷೇತ್ರದಲ್ಲೂ ಚುನಾವಣಾ ಪ್ರಚಾರದ ವೇಳೆ ಹೆಚ್ಚು ಜನ ಜಂಗುಳಿ ಸೇರಿದ ಕಡೆ ಬಿಬಿಎಂಪಿ ವತಿಯಿಂದಲೇ ಕೋವಿಡ್ ಪರೀಕ್ಷೆ ನಡೆಸುವುದಕ್ಕೆ ವ್ಯವಸ್ಥೆ ಕಲ್ಪಿಸಲಿದ್ದೇವೆ. ಇಂತಹ ಕಡೆ ಜನರೇ ಸ್ವಯಂಪ್ರೇರಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಜೆ.ಮಂಜುನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಬಿಬಿಂಎಂಪಿ ಸಲಹೆ ನೀಡಿದೆ.</p>.<p>‘ಈ ಕ್ಷೇತ್ರದಲ್ಲಿ ಬಿಬಿಎಂಪಿ ಸಿಬ್ಬಂದಿ ಒಂದು ತಿಂಗಳಿನಿಂದ ಚುನಾವಣೆ ಕರ್ತವ್ಯದಲ್ಲಿ ತೊಡಗಿದ್ದರು. ಸೋಂಕು ಹರಡದಂತೆ ನಾವು ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದೆವು. ಆದರೂ ಸುರಕ್ಷತೆಯ ದೃಷ್ಟಿಯಿಂದ ಈ ಸಿಬ್ಬಂದಿಗಳೆಲ್ಲರೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಅವರು ಪರೀಕ್ಷೆ ಮಾಡಿಸಿಕೊಳ್ಳಲು ಶುಕ್ರವಾರದಿಂದ ಸೋಮವಾರದವರೆಗೆ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದೇನೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಮಂಗಳವಾರ ನಡೆದ ಮತದಾನದ ವೇಳೆ ಪ್ರಿಸೈಡಿಂಗ್ ಅಧಿಕಾರಿಗಳು, ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ಸಹಾಯಕ ಸಿಬ್ಬಂದಿ, ಭದ್ರತಾ ಸಿಬ್ಬಂದಿಗಳಾಗಿ ಕರ್ತವ್ಯ ನಿರ್ವಹಿಸಿದ ಬಹುತೇಕರು ಈ ಕ್ಷೇತ್ರದ ಹೊರಗಿನವರು. ಮುಂಜಾಗ್ರತಾ ದೃಷ್ಟಿಯಿಂದ ಅವರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ’ ಎಂದು ಆರ್.ಆರ್.ನಗರ ವಲಯದ ಉಸ್ತುವಾರಿ ಹೊತ್ತಿರುವ ವಿಶೇಷ ಆಯುಕ್ತ ಜೆ.ಮಂಜುನಾಥ್ ಅಭಿಪ್ರಾಯಪಟ್ಟರು.</p>.<p>ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಭ್ಯರ್ಥಿಗಳು ಅಂತರ ಕಾಪಾಡಿರಲಿಲ್ಲ. ಚುನಾವಣಾ ಪ್ರಚಾರ ಸಭೆಗಳಲ್ಲಿ ಸೇರಬಹುದಾದ ಜನರ ಸಂಖ್ಯೆಗೆ ಆಯೋಗ ಮಿತಿ ನಿಗದಿಪಡಿಸಿತ್ತಾದರೂ ಅದನ್ನೂ ಮೀರಿ ಸೂರಾರು ಸಂಖ್ಯೆಯಲ್ಲಿ ಜನ ಗುಂಪುಗೂಡಿದ್ದರು.</p>.<p>ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ಚುನಾವಣೆ ಸಮೀಪಿಸುತ್ತಿದ್ದಂತೆ ಈ ಕ್ಷೇತ್ರದಲ್ಲಿ ಕೋವಿಡ್ ಪರೀಕ್ಷೆ ಪ್ರಮಾಣವನ್ನೂ ಬಿಬಿಎಂಪಿ ಹೆಚ್ಚಿಸಿತ್ತು. ಕೋವಿಡ್ ಪರೀಕ್ಷೆ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.</p>.<p>‘ಕ್ಷೇತ್ರದಲ್ಲೂ ಚುನಾವಣಾ ಪ್ರಚಾರದ ವೇಳೆ ಹೆಚ್ಚು ಜನ ಜಂಗುಳಿ ಸೇರಿದ ಕಡೆ ಬಿಬಿಎಂಪಿ ವತಿಯಿಂದಲೇ ಕೋವಿಡ್ ಪರೀಕ್ಷೆ ನಡೆಸುವುದಕ್ಕೆ ವ್ಯವಸ್ಥೆ ಕಲ್ಪಿಸಲಿದ್ದೇವೆ. ಇಂತಹ ಕಡೆ ಜನರೇ ಸ್ವಯಂಪ್ರೇರಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಜೆ.ಮಂಜುನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>