<p><strong>ಬೆಂಗಳೂರು: </strong>ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಕೋವಿಡ್ ಶಂಕಿತರ ಮಾದರಿಗಳ ಪರೀಕ್ಷೆ ಸದ್ಯ ದಿನಕ್ಕೆ 250 ಆಗುತ್ತಿದ್ದು ಅದನ್ನು 1,000ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಯಿತು.</p>.<p>ಪಶ್ಚಿಮ ವಲಯದ ಕೋವಿಡ್ ಉಸ್ತುವಾರಿಯೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಇರೊಫಿನ್ಸ್ ಕ್ಲಿನಿಕಲ್ ಜೆನೆಟಿಕ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಧಾನಷು ಶ್ರೀವಾಸ್ತವ ಅವರ ಜತೆ ಗುರುವಾರ ಮಾತುಕತೆ ನಡೆಸಿದ ನಂತರ ಈ ವಿಷಯ ತಿಳಿಸಿದರು.</p>.<p>ಇರೊಫಿನ್ಸ್ ಸಂಸ್ಥೆ, ಮಾದರಿಗಳ ಪರೀಕ್ಷೆ ಸಾಮರ್ಥ್ಯವನ್ನು 250ರಿಂದ1000ಕ್ಕೆ ಹೆಚ್ಚಿಸಿಕೊಂಡಿದ್ದು, ನಾಳೆಯಿಂದಲೇ ಈ ಕೆಲಸ ಮಾಡಲಿದೆ ಎಂದು ಹೇಳಿದರು.</p>.<p>ಪಶ್ಚಿಮ ವಲಯದಲ್ಲಿ ಆರು ವಿಧಾನಸಭಾ ಕ್ಷೇತ್ರಗಳು ಇದ್ದು ತಲಾ 150 ಮಾದರಿಗಳನ್ನು ಹೆಚ್ಚುವರಿಯಾಗಿ ಪರೀಕ್ಷೆ ಮಾಡಲಾಗುವುದು. ಇದು ತ್ವರಿತವಾಗಿ ಚಿಕಿತ್ಸೆ ನೀಡಲು ಅನುಕೂಲ ಆಗುತ್ತದೆ ಎಂದರು.</p>.<p>ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಚಿದಾನಂದ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಕೋವಿಡ್ ಶಂಕಿತರ ಮಾದರಿಗಳ ಪರೀಕ್ಷೆ ಸದ್ಯ ದಿನಕ್ಕೆ 250 ಆಗುತ್ತಿದ್ದು ಅದನ್ನು 1,000ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಯಿತು.</p>.<p>ಪಶ್ಚಿಮ ವಲಯದ ಕೋವಿಡ್ ಉಸ್ತುವಾರಿಯೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಇರೊಫಿನ್ಸ್ ಕ್ಲಿನಿಕಲ್ ಜೆನೆಟಿಕ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಧಾನಷು ಶ್ರೀವಾಸ್ತವ ಅವರ ಜತೆ ಗುರುವಾರ ಮಾತುಕತೆ ನಡೆಸಿದ ನಂತರ ಈ ವಿಷಯ ತಿಳಿಸಿದರು.</p>.<p>ಇರೊಫಿನ್ಸ್ ಸಂಸ್ಥೆ, ಮಾದರಿಗಳ ಪರೀಕ್ಷೆ ಸಾಮರ್ಥ್ಯವನ್ನು 250ರಿಂದ1000ಕ್ಕೆ ಹೆಚ್ಚಿಸಿಕೊಂಡಿದ್ದು, ನಾಳೆಯಿಂದಲೇ ಈ ಕೆಲಸ ಮಾಡಲಿದೆ ಎಂದು ಹೇಳಿದರು.</p>.<p>ಪಶ್ಚಿಮ ವಲಯದಲ್ಲಿ ಆರು ವಿಧಾನಸಭಾ ಕ್ಷೇತ್ರಗಳು ಇದ್ದು ತಲಾ 150 ಮಾದರಿಗಳನ್ನು ಹೆಚ್ಚುವರಿಯಾಗಿ ಪರೀಕ್ಷೆ ಮಾಡಲಾಗುವುದು. ಇದು ತ್ವರಿತವಾಗಿ ಚಿಕಿತ್ಸೆ ನೀಡಲು ಅನುಕೂಲ ಆಗುತ್ತದೆ ಎಂದರು.</p>.<p>ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಚಿದಾನಂದ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>