‘6 ಅಡಿ ಅಂತರ ಎಂಬ ಕೋವಿಡ್ ನಿಯಮಕ್ಕೆ ಬಸ್ಗಳಲ್ಲಿ ಬೆಲೆ ಇಲ್ಲವಾಗಿದೆ. ದಟ್ಟಣೆ ನಡುವೆ ನಿಂತು ಪ್ರಯಾಣಿಸಬೇಕಾದ ಅನಿವಾರ್ಯತೆಯನ್ನು ಬಿಎಂಟಿಸಿ ಸೃಷ್ಟಿಸಿದೆ. ಅದಕ್ಕೆ ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡಿ ದಂಡ ಮತ್ತು ಅಮಾನತ್ತಿನಂತಹ ಶಿಕ್ಷೆಗಳನ್ನು ವಿಧಿಸಲಾಗುತ್ತಿದೆ. ಕೋವಿಡ್ಗೆ ಸಿಬ್ಬಂದಿ ಮತ್ತು ಪ್ರಯಾಣಿಕರು ತುತ್ತಾಗುವುದನ್ನು ತಪ್ಪಿಸಲು ಅಗತ್ಯ ಎಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಸೋಂಕಿಗೆ ಬಲಿಯಾಗಿರುವ ಸಿಬ್ಬಂದಿ ಕುಟುಂಬಕ್ಕೆ ₹30 ಲಕ್ಷ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದೆ.