<p><strong>ಕೆ.ಆರ್.ಪುರ:</strong> ‘ಕೋವಿಡ್ ನಿಯಂತ್ರಿಸಲು ಲಸಿಕೆ ಕಂಡುಹಿಡಿಯಲಾಗಿದೆ. ಲಸಿಕೆ ಪಡೆದುಕೊಂಡವರು ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಅಡ್ಡ ಪರಿಣಾಮವಾಗದು’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.</p>.<p>ಕೆ.ಆರ್.ಪುರದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ವಿತರಿಸಿ ಮಾತನಾಡಿದ ಅವರು, ‘ಕೊರೊನಾ ಸೇನಾನಿಗಳಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಿಸಲಾಗುವುದು’ ಎಂದರು.</p>.<p>ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ‘ವಿಜ್ಞಾನಿಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕ ಪರವಾಗಿ ಧನ್ಯವಾದಗಳು ಅರ್ಪಿಸುತ್ತೇವೆ. ಮೋದಿಯವರ ಸತತ ಪ್ರಯತ್ನದ ನಂತರ ಭಾರತಕ್ಕೆ ಲಸಿಕೆ ಲಭಿಸಿದೆ’ ಎಂದರು.</p>.<p>ತಾಲ್ಲೂಕು ಆಸ್ಪತ್ರೆ ವತಿಯಿಂದ ಪ್ರಥಮ ಲಸಿಕೆ ಪಡೆದ ಡಾ.ಅಶೋಕ್ ಮಾತನಾಡಿ, ‘ನಾನು ಲಸಿಕೆ ಪಡೆದು ಆರೋಗ್ಯವಾಗಿದ್ದೇನೆ. ಯಾವುದೇ ಸಮಸ್ಯೆಯಾಗಿಲ್ಲ. ನಮ್ಮ ಸಿಬ್ಬಂದಿಗೆ ಧೈರ್ಯ ಬರಲು ಮೊದಲಿಗನಾಗಿ ಲಸಿಕೆ ಪಡೆದಿದ್ದು ಖುಷಿ ಆಗಿದೆ’ ಎಂದರು.</p>.<p>ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಭಾನುಪ್ರಕಾಶ, ಡಾ.ರಜನಿ, ಡಾ.ಮದನಿ, ಡಿ.ಎಲ್.ಒ ನದೀಮ್ ಅಹಮದ್, ಶ್ರೀನಿವಾಸ್, ತಾಲ್ಲೂಕು ವೈದ್ಯ ಅಧಿಕಾರಿ ಚಂದ್ರಶೇಖರ್, ಪಿ.ಜೆ.ಅಂತೋನಿಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಕೋವಿಡ್ ನಿಯಂತ್ರಿಸಲು ಲಸಿಕೆ ಕಂಡುಹಿಡಿಯಲಾಗಿದೆ. ಲಸಿಕೆ ಪಡೆದುಕೊಂಡವರು ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಅಡ್ಡ ಪರಿಣಾಮವಾಗದು’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.</p>.<p>ಕೆ.ಆರ್.ಪುರದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ವಿತರಿಸಿ ಮಾತನಾಡಿದ ಅವರು, ‘ಕೊರೊನಾ ಸೇನಾನಿಗಳಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಿಸಲಾಗುವುದು’ ಎಂದರು.</p>.<p>ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ‘ವಿಜ್ಞಾನಿಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕ ಪರವಾಗಿ ಧನ್ಯವಾದಗಳು ಅರ್ಪಿಸುತ್ತೇವೆ. ಮೋದಿಯವರ ಸತತ ಪ್ರಯತ್ನದ ನಂತರ ಭಾರತಕ್ಕೆ ಲಸಿಕೆ ಲಭಿಸಿದೆ’ ಎಂದರು.</p>.<p>ತಾಲ್ಲೂಕು ಆಸ್ಪತ್ರೆ ವತಿಯಿಂದ ಪ್ರಥಮ ಲಸಿಕೆ ಪಡೆದ ಡಾ.ಅಶೋಕ್ ಮಾತನಾಡಿ, ‘ನಾನು ಲಸಿಕೆ ಪಡೆದು ಆರೋಗ್ಯವಾಗಿದ್ದೇನೆ. ಯಾವುದೇ ಸಮಸ್ಯೆಯಾಗಿಲ್ಲ. ನಮ್ಮ ಸಿಬ್ಬಂದಿಗೆ ಧೈರ್ಯ ಬರಲು ಮೊದಲಿಗನಾಗಿ ಲಸಿಕೆ ಪಡೆದಿದ್ದು ಖುಷಿ ಆಗಿದೆ’ ಎಂದರು.</p>.<p>ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಭಾನುಪ್ರಕಾಶ, ಡಾ.ರಜನಿ, ಡಾ.ಮದನಿ, ಡಿ.ಎಲ್.ಒ ನದೀಮ್ ಅಹಮದ್, ಶ್ರೀನಿವಾಸ್, ತಾಲ್ಲೂಕು ವೈದ್ಯ ಅಧಿಕಾರಿ ಚಂದ್ರಶೇಖರ್, ಪಿ.ಜೆ.ಅಂತೋನಿಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>