<p><strong>ಬೆಂಗಳೂರು: </strong>ಕೋವಿಡ್ನಿಂದ ಪಾರಾಗಲು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಆಸ್ಪತ್ರೆಗೆ ಬರುತ್ತಿರುವವರಲ್ಲಿಯೇ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದೆ. ಕೋವಿಡ್ ಆಸ್ಪತ್ರೆಗಳಲ್ಲಿಯೇ ಲಸಿಕೆ ವಿತರಣೆ ಮಾಡುತ್ತಿರುವುದು ಇದಕ್ಕೆ ಕಾರಣ ಎಂದು ಹಿರಿಯ ನಾಗರಿಕರು ದೂರುತ್ತಾರೆ.</p>.<p>‘ಕೋವಿಡ್ ರೋಗಿಗಳಿರುವ ಆಸ್ಪತ್ರೆಯಲ್ಲಿಯೇ ಲಸಿಕೆ ವಿತರಣೆಯೂ ಮಾಡಲಾಗುತ್ತಿದೆ. ಅಂದರೆ, ಆರೋಗ್ಯವಾಗಿರುವವರೂ ಇಂತಹ ಅಪಾಯಕಾರಿ ಸ್ಥಳಗಳಿಗೆ ಬರಬೇಕಾಗಿದೆ. ಹೆಚ್ಚು ಜನ ಸೇರುತ್ತಿರುತ್ತಿರುವುದರಿಂದ ಅಂತರ ಕಾಪಾಡಿಕೊಳ್ಳುವುದಕ್ಕೂ ಆಗುತ್ತಿಲ್ಲ’ ಎಂದು ಹಿರಿಯ ನಾಗರಿಕ ಕೃಷ್ಣಮೂರ್ತಿ ದೂರಿದರು.</p>.<p>ಸಿ.ವಿ. ರಾಮನ್ ನಗರ ಮತ್ತು ಇಂದಿರಾ ನಗರದಲ್ಲಿ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ಲಸಿಕೆ ಹಾಕಿಸಿಕೊಳ್ಳಲು ಬಂದಿದ್ದ ಅನೇಕರು ಇದೇ ರೀತಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ನಗರದ ದೊಡ್ಡ ಕ್ರೀಡಾಂಗಣಗಳನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲು ಅವಕಾಶವಿದೆ. ಸರ್ಕಾರ ಈ ನಿಟ್ಟಿನಲ್ಲಿ ಯೋಚಿಸಿ ಕಾರ್ಯಪ್ರವೃತ್ತರಾಗಬೇಕು. ವಿಶಾಲ ಮೈದಾನಗಳಲ್ಲಿ ಜನ ತಾವೇ ತಾವಾಗಿ ಅಂತರ ಕಾಪಾಡಿಕೊಳ್ಳುತ್ತಾರೆ. ಸೋಂಕು ತಗುಲುವ ಅಪಾಯವೂ ಇರುವುದಿಲ್ಲ. ಕೋವಿಡ್ ಆಸ್ಪತ್ರೆಗಳಲ್ಲಿನ ರೋಗಿಗಳಿಗೂ ತೊಂದರೆ ಉಂಟಾಗುವುದಿಲ್ಲ’ ಎಂದು ಅವರು ಸಲಹೆ ನೀಡಿದರು.</p>.<p>ಮಲ್ಲೇಶ್ವರದ ಫುಟ್ಬಾಲ್ ಮೈದಾನ, ನ್ಯಾಷನಲ್ ಕಾಲೇಜು ಮೈದಾನ, ಅರಮನೆ ಮೈದಾನ, ಕಂಠೀರವ ಕ್ರೀಡಾಂಗಣ, ಕಬ್ಬನ್ ಪಾರ್ಕ್, ಲಾಲ್ಬಾಗ್ ನಲ್ಲಿ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಹಲವರು ಒತ್ತಾಯಿಸುತ್ತಾರೆ.</p>.<p class="Subhead"><strong>3 ಮೀಟರ್ ಅಂತರ ಅಗತ್ಯ:</strong>‘ಎರಡನೇ ಅಲೆಯಲ್ಲಿ ವೈರಾಣು ತೀವ್ರವಾಗಿ ಹರಡುತ್ತಿದೆ. ಕೇವಲ 6 ಅಡಿ ಅಂತರ ಕಾಪಾಡಿಕೊಂಡರೂ ಪ್ರಯೋಜನವಾಗದು. ಕನಿಷ್ಠ 3 ಮೀಟರ್ ಅಂತರ ಕಾಪಾಡಿಕೊಳ್ಳಬೇಕು. ಇಲ್ಲದಿದ್ದರೆ ಎಷ್ಟೇ ವೈದ್ಯರು, ಶುಶ್ರೂಷಕರು ಕೆಲಸ ಮಾಡಿದರೂ, ಸಾವಿರಾರು ಐಸಿಯು ಹಾಸಿಗೆಗಳು ಇದ್ದರೂ ಯಾರೂ ಕಾಪಾಡಲು ಆಗುವುದಿಲ್ಲ. ಆದರೆ, ಆಸ್ಪತ್ರೆಗಳು ಚಿಕ್ಕದಿರುವುದರಿಂದ ಹೆಚ್ಚು ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುವುದಿಲ್ಲ’ ಎಂದು ವೈದ್ಯರೊಬ್ಬರು ಹೇಳಿದರು.</p>.<p class="Subhead"><strong>ಮಾರ್ಗಸೂಚಿ ಪಾಲನೆ:</strong>‘ಲಸಿಕೆ ಹಾಕಿಸಿಕೊಳ್ಳಲು ಕೋವಿಡ್ ಆಸ್ಪತ್ರೆಗೆ ಬರುತ್ತಿರುವವರಿಗೂ ಸೋಂಕು ತಗುಲುವ ಅಪಾಯ ಇರಬಹುದು. ಆದರೆ, ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕೋವಿಡ್ ಮಾರ್ಗಸೂಚಿಗಳ ಅನ್ವಯವೇ ಲಸಿಕೆ ವಿತರಿಸಲಾಗುತ್ತಿದೆ’ ಎಂದು ಬೆಂಗಳೂರು ನಗರ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅನ್ಸರ್ ಅಹಮದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕೋವಿಡ್ ಆಸ್ಪತ್ರೆಗಳ ಬದಲು ಕ್ರೀಡಾಂಗಣ ಅಥವಾ ಆಟದ ಮೈದಾನಗಳಲ್ಲಿ ಇದಕ್ಕೆ ವ್ಯವಸ್ಥೆ ಮಾಡುವುದು ಉತ್ತಮ ಸಲಹೆ. ಇದನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ನಿಂದ ಪಾರಾಗಲು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಆಸ್ಪತ್ರೆಗೆ ಬರುತ್ತಿರುವವರಲ್ಲಿಯೇ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದೆ. ಕೋವಿಡ್ ಆಸ್ಪತ್ರೆಗಳಲ್ಲಿಯೇ ಲಸಿಕೆ ವಿತರಣೆ ಮಾಡುತ್ತಿರುವುದು ಇದಕ್ಕೆ ಕಾರಣ ಎಂದು ಹಿರಿಯ ನಾಗರಿಕರು ದೂರುತ್ತಾರೆ.</p>.<p>‘ಕೋವಿಡ್ ರೋಗಿಗಳಿರುವ ಆಸ್ಪತ್ರೆಯಲ್ಲಿಯೇ ಲಸಿಕೆ ವಿತರಣೆಯೂ ಮಾಡಲಾಗುತ್ತಿದೆ. ಅಂದರೆ, ಆರೋಗ್ಯವಾಗಿರುವವರೂ ಇಂತಹ ಅಪಾಯಕಾರಿ ಸ್ಥಳಗಳಿಗೆ ಬರಬೇಕಾಗಿದೆ. ಹೆಚ್ಚು ಜನ ಸೇರುತ್ತಿರುತ್ತಿರುವುದರಿಂದ ಅಂತರ ಕಾಪಾಡಿಕೊಳ್ಳುವುದಕ್ಕೂ ಆಗುತ್ತಿಲ್ಲ’ ಎಂದು ಹಿರಿಯ ನಾಗರಿಕ ಕೃಷ್ಣಮೂರ್ತಿ ದೂರಿದರು.</p>.<p>ಸಿ.ವಿ. ರಾಮನ್ ನಗರ ಮತ್ತು ಇಂದಿರಾ ನಗರದಲ್ಲಿ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ಲಸಿಕೆ ಹಾಕಿಸಿಕೊಳ್ಳಲು ಬಂದಿದ್ದ ಅನೇಕರು ಇದೇ ರೀತಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ನಗರದ ದೊಡ್ಡ ಕ್ರೀಡಾಂಗಣಗಳನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲು ಅವಕಾಶವಿದೆ. ಸರ್ಕಾರ ಈ ನಿಟ್ಟಿನಲ್ಲಿ ಯೋಚಿಸಿ ಕಾರ್ಯಪ್ರವೃತ್ತರಾಗಬೇಕು. ವಿಶಾಲ ಮೈದಾನಗಳಲ್ಲಿ ಜನ ತಾವೇ ತಾವಾಗಿ ಅಂತರ ಕಾಪಾಡಿಕೊಳ್ಳುತ್ತಾರೆ. ಸೋಂಕು ತಗುಲುವ ಅಪಾಯವೂ ಇರುವುದಿಲ್ಲ. ಕೋವಿಡ್ ಆಸ್ಪತ್ರೆಗಳಲ್ಲಿನ ರೋಗಿಗಳಿಗೂ ತೊಂದರೆ ಉಂಟಾಗುವುದಿಲ್ಲ’ ಎಂದು ಅವರು ಸಲಹೆ ನೀಡಿದರು.</p>.<p>ಮಲ್ಲೇಶ್ವರದ ಫುಟ್ಬಾಲ್ ಮೈದಾನ, ನ್ಯಾಷನಲ್ ಕಾಲೇಜು ಮೈದಾನ, ಅರಮನೆ ಮೈದಾನ, ಕಂಠೀರವ ಕ್ರೀಡಾಂಗಣ, ಕಬ್ಬನ್ ಪಾರ್ಕ್, ಲಾಲ್ಬಾಗ್ ನಲ್ಲಿ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಹಲವರು ಒತ್ತಾಯಿಸುತ್ತಾರೆ.</p>.<p class="Subhead"><strong>3 ಮೀಟರ್ ಅಂತರ ಅಗತ್ಯ:</strong>‘ಎರಡನೇ ಅಲೆಯಲ್ಲಿ ವೈರಾಣು ತೀವ್ರವಾಗಿ ಹರಡುತ್ತಿದೆ. ಕೇವಲ 6 ಅಡಿ ಅಂತರ ಕಾಪಾಡಿಕೊಂಡರೂ ಪ್ರಯೋಜನವಾಗದು. ಕನಿಷ್ಠ 3 ಮೀಟರ್ ಅಂತರ ಕಾಪಾಡಿಕೊಳ್ಳಬೇಕು. ಇಲ್ಲದಿದ್ದರೆ ಎಷ್ಟೇ ವೈದ್ಯರು, ಶುಶ್ರೂಷಕರು ಕೆಲಸ ಮಾಡಿದರೂ, ಸಾವಿರಾರು ಐಸಿಯು ಹಾಸಿಗೆಗಳು ಇದ್ದರೂ ಯಾರೂ ಕಾಪಾಡಲು ಆಗುವುದಿಲ್ಲ. ಆದರೆ, ಆಸ್ಪತ್ರೆಗಳು ಚಿಕ್ಕದಿರುವುದರಿಂದ ಹೆಚ್ಚು ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುವುದಿಲ್ಲ’ ಎಂದು ವೈದ್ಯರೊಬ್ಬರು ಹೇಳಿದರು.</p>.<p class="Subhead"><strong>ಮಾರ್ಗಸೂಚಿ ಪಾಲನೆ:</strong>‘ಲಸಿಕೆ ಹಾಕಿಸಿಕೊಳ್ಳಲು ಕೋವಿಡ್ ಆಸ್ಪತ್ರೆಗೆ ಬರುತ್ತಿರುವವರಿಗೂ ಸೋಂಕು ತಗುಲುವ ಅಪಾಯ ಇರಬಹುದು. ಆದರೆ, ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕೋವಿಡ್ ಮಾರ್ಗಸೂಚಿಗಳ ಅನ್ವಯವೇ ಲಸಿಕೆ ವಿತರಿಸಲಾಗುತ್ತಿದೆ’ ಎಂದು ಬೆಂಗಳೂರು ನಗರ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅನ್ಸರ್ ಅಹಮದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕೋವಿಡ್ ಆಸ್ಪತ್ರೆಗಳ ಬದಲು ಕ್ರೀಡಾಂಗಣ ಅಥವಾ ಆಟದ ಮೈದಾನಗಳಲ್ಲಿ ಇದಕ್ಕೆ ವ್ಯವಸ್ಥೆ ಮಾಡುವುದು ಉತ್ತಮ ಸಲಹೆ. ಇದನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>