ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ದೇಶದಾದ್ಯಂತ ಲಸಿಕೆಯ ತಾಲೀಮು (ಡ್ರೈ ರನ್) ನಡೆಯಲಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಲಸಿಕೆಯ ತಾಲೀಮು ನಡೆಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿಯನ್ನೂ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ದಕ್ಷಿಣ ವಲಯದ ವಿದ್ಯಾಪೀಠದಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರ ಹಾಗೂ ಪಶ್ಚಿಮ ವಲಯದ ಕಾಮಾಕ್ಷಿಪಾಳ್ಯದಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಗುತ್ತದೆ’ ಎಂದು ವಿವರಿಸಿದರು.