<p><strong>ಬೆಂಗಳೂರು: </strong>ಮುಜರಾಯಿ ಹಾಗೂ ಖಾಸಗಿ ದೇವಾಲಯಗಳಲ್ಲಿ ಸೇವೆ ಸಲ್ಲಿಸುವ ಅರ್ಚಕರು, ಪರಿಚಾರಕರು, ಸೇವಾ ಸಿಬ್ಬಂದಿ, ಮಂಗಳವಾದ್ಯ ನುಡಿಸುವವರು ಮತ್ತು ಅವರ ಕುಟುಂಬದ 18 ವರ್ಷ ಮೇಲ್ಪಟ್ಟ ಸದಸ್ಯರಿಗೆ ಶುಕ್ರವಾರ ಕೋವಿಡ್ ಲಸಿಕೆ ವಿತರಿಸಲಾಗುತ್ತದೆ.</p>.<p>ಕರ್ನಾಟಕ ಅರಣ್ಯ ನಿಗಮದ ಅಧ್ಯಕ್ಷೆ ತಾರಾ ಅನೂರಾಧಾ ಅವರು ರೂಪೇನ ಅಗ್ರಹಾರದಲ್ಲಿರುವ ಶ್ರೀಹರಿ ವೈಕುಂಠ ಕ್ಷೇತ್ರದಲ್ಲಿ ಉಚಿತವಾಗಿ ಲಸಿಕೆ ಒದಗಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ಲಸಿಕೆ ನೀಡಲಾಗುತ್ತದೆ.</p>.<p>‘ಎಲ್ಲ ದೇವಾಲಯಗಳ ಅರ್ಚಕರು, ಪರಿಚಾರಕರು ಹಾಗೂ ಸೇವಾ ಸಿಬ್ಬಂದಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಲಸಿಕೆ ಕೇಂದ್ರಕ್ಕೆ ಬರುವಾಗ ಕಡ್ಡಾಯವಾಗಿ ಆಧಾರ್ ಅಥವಾ ಛಾಯಾಚಿತ್ರ ಇರುವ ಗುರುತಿನ ಚೀಟಿ ತರಬೇಕು’ ಎಂದು ತಾರಾ ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ಸಂಪರ್ಕಕ್ಕೆ ಮೊ.: 9480620338 ಅಥವಾ 8217737471</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಜರಾಯಿ ಹಾಗೂ ಖಾಸಗಿ ದೇವಾಲಯಗಳಲ್ಲಿ ಸೇವೆ ಸಲ್ಲಿಸುವ ಅರ್ಚಕರು, ಪರಿಚಾರಕರು, ಸೇವಾ ಸಿಬ್ಬಂದಿ, ಮಂಗಳವಾದ್ಯ ನುಡಿಸುವವರು ಮತ್ತು ಅವರ ಕುಟುಂಬದ 18 ವರ್ಷ ಮೇಲ್ಪಟ್ಟ ಸದಸ್ಯರಿಗೆ ಶುಕ್ರವಾರ ಕೋವಿಡ್ ಲಸಿಕೆ ವಿತರಿಸಲಾಗುತ್ತದೆ.</p>.<p>ಕರ್ನಾಟಕ ಅರಣ್ಯ ನಿಗಮದ ಅಧ್ಯಕ್ಷೆ ತಾರಾ ಅನೂರಾಧಾ ಅವರು ರೂಪೇನ ಅಗ್ರಹಾರದಲ್ಲಿರುವ ಶ್ರೀಹರಿ ವೈಕುಂಠ ಕ್ಷೇತ್ರದಲ್ಲಿ ಉಚಿತವಾಗಿ ಲಸಿಕೆ ಒದಗಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ಲಸಿಕೆ ನೀಡಲಾಗುತ್ತದೆ.</p>.<p>‘ಎಲ್ಲ ದೇವಾಲಯಗಳ ಅರ್ಚಕರು, ಪರಿಚಾರಕರು ಹಾಗೂ ಸೇವಾ ಸಿಬ್ಬಂದಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಲಸಿಕೆ ಕೇಂದ್ರಕ್ಕೆ ಬರುವಾಗ ಕಡ್ಡಾಯವಾಗಿ ಆಧಾರ್ ಅಥವಾ ಛಾಯಾಚಿತ್ರ ಇರುವ ಗುರುತಿನ ಚೀಟಿ ತರಬೇಕು’ ಎಂದು ತಾರಾ ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ಸಂಪರ್ಕಕ್ಕೆ ಮೊ.: 9480620338 ಅಥವಾ 8217737471</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>