<p><strong>ಬೆಂಗಳೂರು:</strong> ನಗರದಲ್ಲಿ ಹೊಸದಾಗಿ 2,105 ಮಂದಿ ಕೋವಿಡ್ ಪೀಡಿತರಾಗಿರುವುದು ಭಾನುವಾರ ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 59 ಸಾವಿರ ದಾಟಿದೆ.</p>.<p>ಸೋಂಕಿತರ ಜತೆಗೆ ಚೇತರಿಸಿಕೊಳ್ಳುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಸೋಂಕಿತರಲ್ಲಿ 2,331 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಒಟ್ಟು ಚೇತರಿಸಿಕೊಂಡವರ ಸಂಖ್ಯೆ 20 ಸಾವಿರದಾಟಿದೆ.ಕೋವಿಡ್ ಪೀಡಿತರಲ್ಲಿಮತ್ತೆ 21 ಮಂದಿ ಮೃತಪಟ್ಟಿದ್ದು, ಕೋವಿಡ್ನಿಂದ ಸಾವಿಗೀಡಾದವರ ಸಂಖ್ಯೆ 1,077ಕ್ಕೆ ಏರಿಕೆಯಾಗಿದೆ. ಭಾನುವಾರ ದೃಢಪಟ್ಟ ಮರಣ ಪ್ರಕರಣದಲ್ಲಿ ನಾಲ್ಕು ಮಂದಿ 50 ವರ್ಷದೊಳಗಿನವರು.</p>.<p>ಹೊಸದಾಗಿ ದೃಢಪಟ್ಟ ಪ್ರಕರಣಗಳಲ್ಲಿ ಪಶ್ಚಿಮ ವಲಯದಲ್ಲಿಯೇ ಅಧಿಕ ಮಂದಿ (610) ಸೋಂಕಿತರಾಗಿದ್ದಾರೆ.ದಕ್ಷಿಣ ವಲಯದಲ್ಲಿ 333, ಬೊಮ್ಮನಹಳ್ಳಿಯಲ್ಲಿ 236, ಪೂರ್ವ ವಲಯದಲ್ಲಿ 268, ಮಹದೇವಪುರದಲ್ಲಿ 117, ಆರ್.ಆರ್.ನಗರದಲ್ಲಿ 138, ಯಲಹಂಕದಲ್ಲಿ 83 ಹಾಗೂ ದಾಸರಹಳ್ಳಿಯಲ್ಲಿ 25 ಮಂದಿಗೆ ಸೋಂಕು ತಗುಲಿದೆ. ಕಳೆದ 10 ದಿನಗಳಿಂದ ಪಶ್ಚಿಮ ವಲಯದಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದು, ಈ ಅವಧಿಯಲ್ಲಿ ನಗರದಲ್ಲಿ ಸೋಂಕಿತರಾದವರಲ್ಲಿ ಶೇ 24 ರಷ್ಟು ಮಂದಿ<br />ಆ ಭಾಗಕ್ಕೆ ಸೇರಿದವರಾಗಿದ್ದಾರೆ.</p>.<p>37 ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆಗಳು ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. 339 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ನಗರದ ಜ್ವರ ಚಿಕಿತ್ಸಾಲಯಗಳಲ್ಲಿ ಒಂದೇ ದಿನ 3,001 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಅಲ್ಲಿ ಈವರೆಗೆ ಒಟ್ಟು 56,848 ಮಂದಿಯನ್ನು ಪರೀಕ್ಷೆ ಮಾಡಲಾಗಿದೆ.</p>.<p><strong>ನಗರದ ಕೋವಿಡ್ ಪ್ರಕರಣಗಳ ಅಂಕಿ–ಅಂಶ</strong></p>.<p>ಒಟ್ಟು ಪ್ರಕರಣಗಳು;59,501</p>.<p>ಗುಣಮುಖರಾದವರು;20,910</p>.<p>ಸಕ್ರಿಯ ಪ್ರಕರಣಗಳು;37,513</p>.<p>ಮೃತಪಟ್ಟವರು; 1,077</p>.<p>ಈ ದಿನದ ಏರಿಕೆ;2,105</p>.<p>ಗುಣಮುಖರು; 2,331</p>.<p>ಮೃತಪಟ್ಟವರು; 21</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಹೊಸದಾಗಿ 2,105 ಮಂದಿ ಕೋವಿಡ್ ಪೀಡಿತರಾಗಿರುವುದು ಭಾನುವಾರ ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 59 ಸಾವಿರ ದಾಟಿದೆ.</p>.<p>ಸೋಂಕಿತರ ಜತೆಗೆ ಚೇತರಿಸಿಕೊಳ್ಳುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಸೋಂಕಿತರಲ್ಲಿ 2,331 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಒಟ್ಟು ಚೇತರಿಸಿಕೊಂಡವರ ಸಂಖ್ಯೆ 20 ಸಾವಿರದಾಟಿದೆ.ಕೋವಿಡ್ ಪೀಡಿತರಲ್ಲಿಮತ್ತೆ 21 ಮಂದಿ ಮೃತಪಟ್ಟಿದ್ದು, ಕೋವಿಡ್ನಿಂದ ಸಾವಿಗೀಡಾದವರ ಸಂಖ್ಯೆ 1,077ಕ್ಕೆ ಏರಿಕೆಯಾಗಿದೆ. ಭಾನುವಾರ ದೃಢಪಟ್ಟ ಮರಣ ಪ್ರಕರಣದಲ್ಲಿ ನಾಲ್ಕು ಮಂದಿ 50 ವರ್ಷದೊಳಗಿನವರು.</p>.<p>ಹೊಸದಾಗಿ ದೃಢಪಟ್ಟ ಪ್ರಕರಣಗಳಲ್ಲಿ ಪಶ್ಚಿಮ ವಲಯದಲ್ಲಿಯೇ ಅಧಿಕ ಮಂದಿ (610) ಸೋಂಕಿತರಾಗಿದ್ದಾರೆ.ದಕ್ಷಿಣ ವಲಯದಲ್ಲಿ 333, ಬೊಮ್ಮನಹಳ್ಳಿಯಲ್ಲಿ 236, ಪೂರ್ವ ವಲಯದಲ್ಲಿ 268, ಮಹದೇವಪುರದಲ್ಲಿ 117, ಆರ್.ಆರ್.ನಗರದಲ್ಲಿ 138, ಯಲಹಂಕದಲ್ಲಿ 83 ಹಾಗೂ ದಾಸರಹಳ್ಳಿಯಲ್ಲಿ 25 ಮಂದಿಗೆ ಸೋಂಕು ತಗುಲಿದೆ. ಕಳೆದ 10 ದಿನಗಳಿಂದ ಪಶ್ಚಿಮ ವಲಯದಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದು, ಈ ಅವಧಿಯಲ್ಲಿ ನಗರದಲ್ಲಿ ಸೋಂಕಿತರಾದವರಲ್ಲಿ ಶೇ 24 ರಷ್ಟು ಮಂದಿ<br />ಆ ಭಾಗಕ್ಕೆ ಸೇರಿದವರಾಗಿದ್ದಾರೆ.</p>.<p>37 ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆಗಳು ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. 339 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ನಗರದ ಜ್ವರ ಚಿಕಿತ್ಸಾಲಯಗಳಲ್ಲಿ ಒಂದೇ ದಿನ 3,001 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಅಲ್ಲಿ ಈವರೆಗೆ ಒಟ್ಟು 56,848 ಮಂದಿಯನ್ನು ಪರೀಕ್ಷೆ ಮಾಡಲಾಗಿದೆ.</p>.<p><strong>ನಗರದ ಕೋವಿಡ್ ಪ್ರಕರಣಗಳ ಅಂಕಿ–ಅಂಶ</strong></p>.<p>ಒಟ್ಟು ಪ್ರಕರಣಗಳು;59,501</p>.<p>ಗುಣಮುಖರಾದವರು;20,910</p>.<p>ಸಕ್ರಿಯ ಪ್ರಕರಣಗಳು;37,513</p>.<p>ಮೃತಪಟ್ಟವರು; 1,077</p>.<p>ಈ ದಿನದ ಏರಿಕೆ;2,105</p>.<p>ಗುಣಮುಖರು; 2,331</p>.<p>ಮೃತಪಟ್ಟವರು; 21</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>