<p><strong>ಬೆಂಗಳೂರು: </strong>ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ನಿಂದ ಚೇತರಿಸಿಕೊಳ್ಳುವವರ ಪ್ರಮಾಣ ಒಂದು ವಾರದಿಂದ ಈಚೆಗೆ ಹೆಚ್ಚಳವಾಗುತ್ತಿದೆ. ಈ ವಾರದಲ್ಲಿ ಕೊರೊನಾ ಸೋಂಕು ತಗುಲಿದವರಿಗಿಂತ ಚೇತರಿಸಿಕೊಂಡವರ ಸಂಖ್ಯೆ ಜಾಸ್ತಿ ಇದೆ.</p>.<p>ಜುಲೈ 29ರಿಂದ ಆ.4ರವರೆಗೆ ಒಟ್ಟು 14,212 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, 15,124 ಮಂದಿ ಗುಣಮುಖರಾಗಿದ್ದಾರೆ. ಈಚಿನ ಮೂರು ದಿನಗಳಲ್ಲಿ ಸೋಂಕು ಪತ್ತೆಯಾದವರಿಗಿಂತ ಕಾಯಿಲೆ ವಾಸಿಯಾದವರ ಸಂಖ್ಯೆ ದುಪ್ಪಟ್ಟು ಇದೆ.</p>.<p>‘ಈ ಹಿಂದೆ ಬಿಬಿಎಂಪಿ ವತಿಯಿಂದ ನಿತ್ಯ 3 ಸಾವಿರದಷ್ಟು ಪರೀಕ್ಷೆ ನಡೆಸಲಾಗುತ್ತಿತ್ತು. ಅದನ್ನು ಈಗ 6 ಸಾವಿರಕ್ಕೆ ಹೆಚ್ಚಿಸಿದ್ದೇವೆ. ನಗರದ ಖಾಸಗಿ ಆಸ್ಪತ್ರೆಗಳಲ್ಲೂ ನಿತ್ಯ 4 ಸಾವಿರ ಪರೀಕ್ಷೆಗಳು ನಡೆಯುತ್ತಿವೆ. ನಾವು ಕೋವಿಡ್ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಿದ್ದರಿಂದ ಸೋಂಕಿತರ ಪ್ರಮಾಣವೂ ಹೆಚ್ಚಾಗಿತ್ತು. ಆದರೆ, ಈಗ ಸೋಂಕಿತರಿಗಿಂತ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿರುವುದು ಉತ್ತಮ ಬೆಳವಣಿಗೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದರು.</p>.<p>‘ಕೋವಿಡ್ ಪರೀಕ್ಷೆಗಾಗಿ ಜನರ ಗಂಟಲ ದ್ರವ ಸಂಗ್ರಹಕ್ಕೆ ವಿಜ್ಞಾನ ಪದವೀಧರರನ್ನು ಬಳಸಿಕೊಳ್ಳಲು ಅರ್ಜಿ ಆಹ್ವಾನಿಸಿದ್ದೇವೆ. ಕೋವಿಡ್ ಪರೀಕ್ಷೆಯ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಿದ್ದೇವೆ. 10 ದಿನಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಿತ್ಯ 20 ಸಾವಿರ ಮಂದಿಯನ್ನು ಪರೀಕ್ಷೆಗೊಳಪಡಿಸಲು ಸಿದ್ಧತೆ ನಡೆದಿದೆ’ ಎಂದು ಅವರು ವಿವರಿಸಿದರು.</p>.<p>‘ಆದಷ್ಟು ಹೆಚ್ಚು ಮಂದಿಯನ್ನು ಪರೀಕ್ಷೆಗೊಳಪಡಿಸಿ,ಸೋಂಕನ್ನು ಆದಷ್ಟು ಬೇಗ ಪತ್ತೆ ಹಚ್ಚುವುದು ಹಾಗೂ ಸೋಂಕಿತರನ್ನು ಪ್ರತ್ಯೇಕಿಸಿ ರೋಗ ಹರಡದಂತೆ ತಡೆಯುವುದು ನಮ್ಮ ಉದ್ದೇಶ’ ಎಂದರು.</p>.<p>‘ನಗರದಲ್ಲಿ ಸೋಂಕಿನಿಂದ ಚೇತರಿಸಿಕೊಳ್ಳುವವರ ಪ್ರಮಾಣ ಉಳಿದ ನಗರಗಳಿಗಿಂತ ಕಡಿಮೆ ಇದೆ’ ಎಂದು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ತರಾಟೆಗೆ ತೆಗೆದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ನಿಂದ ಚೇತರಿಸಿಕೊಳ್ಳುವವರ ಪ್ರಮಾಣ ಒಂದು ವಾರದಿಂದ ಈಚೆಗೆ ಹೆಚ್ಚಳವಾಗುತ್ತಿದೆ. ಈ ವಾರದಲ್ಲಿ ಕೊರೊನಾ ಸೋಂಕು ತಗುಲಿದವರಿಗಿಂತ ಚೇತರಿಸಿಕೊಂಡವರ ಸಂಖ್ಯೆ ಜಾಸ್ತಿ ಇದೆ.</p>.<p>ಜುಲೈ 29ರಿಂದ ಆ.4ರವರೆಗೆ ಒಟ್ಟು 14,212 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, 15,124 ಮಂದಿ ಗುಣಮುಖರಾಗಿದ್ದಾರೆ. ಈಚಿನ ಮೂರು ದಿನಗಳಲ್ಲಿ ಸೋಂಕು ಪತ್ತೆಯಾದವರಿಗಿಂತ ಕಾಯಿಲೆ ವಾಸಿಯಾದವರ ಸಂಖ್ಯೆ ದುಪ್ಪಟ್ಟು ಇದೆ.</p>.<p>‘ಈ ಹಿಂದೆ ಬಿಬಿಎಂಪಿ ವತಿಯಿಂದ ನಿತ್ಯ 3 ಸಾವಿರದಷ್ಟು ಪರೀಕ್ಷೆ ನಡೆಸಲಾಗುತ್ತಿತ್ತು. ಅದನ್ನು ಈಗ 6 ಸಾವಿರಕ್ಕೆ ಹೆಚ್ಚಿಸಿದ್ದೇವೆ. ನಗರದ ಖಾಸಗಿ ಆಸ್ಪತ್ರೆಗಳಲ್ಲೂ ನಿತ್ಯ 4 ಸಾವಿರ ಪರೀಕ್ಷೆಗಳು ನಡೆಯುತ್ತಿವೆ. ನಾವು ಕೋವಿಡ್ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಿದ್ದರಿಂದ ಸೋಂಕಿತರ ಪ್ರಮಾಣವೂ ಹೆಚ್ಚಾಗಿತ್ತು. ಆದರೆ, ಈಗ ಸೋಂಕಿತರಿಗಿಂತ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿರುವುದು ಉತ್ತಮ ಬೆಳವಣಿಗೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದರು.</p>.<p>‘ಕೋವಿಡ್ ಪರೀಕ್ಷೆಗಾಗಿ ಜನರ ಗಂಟಲ ದ್ರವ ಸಂಗ್ರಹಕ್ಕೆ ವಿಜ್ಞಾನ ಪದವೀಧರರನ್ನು ಬಳಸಿಕೊಳ್ಳಲು ಅರ್ಜಿ ಆಹ್ವಾನಿಸಿದ್ದೇವೆ. ಕೋವಿಡ್ ಪರೀಕ್ಷೆಯ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಿದ್ದೇವೆ. 10 ದಿನಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಿತ್ಯ 20 ಸಾವಿರ ಮಂದಿಯನ್ನು ಪರೀಕ್ಷೆಗೊಳಪಡಿಸಲು ಸಿದ್ಧತೆ ನಡೆದಿದೆ’ ಎಂದು ಅವರು ವಿವರಿಸಿದರು.</p>.<p>‘ಆದಷ್ಟು ಹೆಚ್ಚು ಮಂದಿಯನ್ನು ಪರೀಕ್ಷೆಗೊಳಪಡಿಸಿ,ಸೋಂಕನ್ನು ಆದಷ್ಟು ಬೇಗ ಪತ್ತೆ ಹಚ್ಚುವುದು ಹಾಗೂ ಸೋಂಕಿತರನ್ನು ಪ್ರತ್ಯೇಕಿಸಿ ರೋಗ ಹರಡದಂತೆ ತಡೆಯುವುದು ನಮ್ಮ ಉದ್ದೇಶ’ ಎಂದರು.</p>.<p>‘ನಗರದಲ್ಲಿ ಸೋಂಕಿನಿಂದ ಚೇತರಿಸಿಕೊಳ್ಳುವವರ ಪ್ರಮಾಣ ಉಳಿದ ನಗರಗಳಿಗಿಂತ ಕಡಿಮೆ ಇದೆ’ ಎಂದು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ತರಾಟೆಗೆ ತೆಗೆದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>