<p><strong>ಬೆಂಗಳೂರು:</strong> ಕೋವಿಡ್ ಪರೀಕ್ಷೆಗೆ ಹೆಚ್ಚುವರಿಯಾಗಿ ಪಡೆದ ಹಣವನ್ನು ಪರೀಕ್ಷೆ ಮಾಡಿಸಿಕೊಂಡವರಿಗೆ ವಾಪಸ್ ನೀಡಬೇಕು ಎಂದು ವಿಕ್ರಮ್ ಆಸ್ಪತ್ರೆಗೆ ಅಧಿಕಾರಿಗಳ ತಂಡ ಸೂಚಿಸಿದೆ. ಇದಕ್ಕೆ ಆಸ್ಪತ್ರೆ ಕೂಡ ಸಮ್ಮತಿ ಸೂಚಿಸಿದೆ.</p>.<p>ನಗರದ ವಿಕ್ರಮ್ ಆಸ್ಪತ್ರೆಯಲ್ಲಿಕೋವಿಡ್ ಪರೀಕ್ಷೆಗೆ ಅಧಿಕ ಶುಲ್ಕ ಪಡೆಯಲಾಗುತ್ತಿದೆ ಎಂಬ ದೂರುಗಳು ಬಂದಿದ್ದರಿಂದ ಅಧಿಕಾರಿಗಳ ತಂಡ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಐಎಎಸ್ ಅಧಿಕಾರಿಮೊಹಮದ್ ಮೊಹಿಸಿನ್ ಹಾಗೂ ಐಪಿಎಸ್ ಅಧಿಕಾರಿ ಪಿ.ಹರಿಶೇಖರನ್ ನೇತೃತ್ವದ ತಂಡ ಅಲ್ಲಿನ ವೈದ್ಯಾಧಿಕಾರಿಗಳಿಂದ ಈ ಬಗ್ಗೆ ಮಾಹಿತಿ ಪಡೆದುಕೊಂಡಿತು. ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಅಧಿಕ ಹಣ ಪಡೆದಲ್ಲಿ ಕಟ್ಟುನಿಟ್ಟಾದ ಕ್ರಮಕೈಗೊಳ್ಳ<br />ಲಾಗುವುದು ಎಂದು ಎಚ್ಚರಿಸಿ, ಹೆಚ್ಚುವರಿ ಹಣವನ್ನು ಪರೀಕ್ಷೆ ಮಾಡಿಸಿಕೊಂಡವರಿಗೆ ವಾಪಸ್ ನೀಡುವಂತೆ ಅಧಿಕಾರಿಗಳು ಸೂಚಿಸಿದರು.</p>.<p>‘ಕೋವಿಡ್ ಪರೀಕ್ಷೆ ದರ ಇಳಿಕೆ ಮಾಡಿದ ಬಳಿಕವೂ ಆಸ್ಪತ್ರೆಯವರು ₹ 5,500 ಶುಲ್ಕವನ್ನು 44 ಮಂದಿಯಿಂದ ವಸೂಲಿ ಮಾಡಿರುವುದು ಗಮನಕ್ಕೆ ಬಂದಿದೆ. ಐಸಿಎಂಆರ್ ಹಾಗೂ ರಾಜ್ಯ ಸರ್ಕಾರ ನಿಗದಿಪಡಿಸಿದಷ್ಟು ದರವನ್ನು ಮಾತ್ರ ಪಡೆದು, ಉಳಿದ ಹಣವನ್ನು ಪರೀಕ್ಷೆ ಮಾಡಿಸಿಕೊಂಡವರಿಗೆ ವಾಪಸ್ ಮಾಡುವಂತೆ ಸೂಚಿಸಿದ್ದೇವೆ. ಅದಕ್ಕೆ ಆಸ್ಪತ್ರೆಯವರು ಕೂಡ ಒಪ್ಪಿದ್ದಾರೆ’ ಎಂದುಮೊಹಮದ್ ಮೊಹಿಸಿನ್ ತಿಳಿಸಿದರು.</p>.<p><strong>ಸರ್ಕಾರದ ಸೂಚನೆಗೆ ಬದ್ಧ:</strong> ಈ ಬಗ್ಗೆ ಸ್ಪಷ್ಟನೆ ನೀಡಿರುವ ವಿಕ್ರಮ್ ಆಸ್ಪತ್ರೆ, ‘ಆರ್ಟಿಪಿಸಿಆರ್ ಪರೀಕ್ಷೆಯ ವರದಿ ಬರಲು 24ರಿಂದ 34 ಗಂಟೆಗಳು ಬೇಕಾಗುತ್ತವೆ ಎಂಬ ಕಾರಣಕ್ಕೆ ಸಿಬಿ–ನಾಟ್ ತಂತ್ರದ ಮೂಲಕ ಪರೀಕ್ಷೆ ಮಾಡಲಾಯಿತು. ಇದು ಆನುವಂಶಿಕ ಪರೀಕ್ಷಾ ವಿಧಾನವಾಗಿದ್ದು, 2 ಗಂಟೆಯಲ್ಲಿಯೇ ವರದಿ ನೀಡಲು ಸಾಧ್ಯವಾಗುತ್ತದೆ. ಪರೀಕ್ಷಾ ವಿಧಾನ ಮತ್ತು ಕಿಟ್ಗೆ ₹ 3,100ರ ಜತೆಗ ಸಾರಿಗೆ ಹಾಗೂ ವೈಯಕ್ತಿಕ ಸುರಕ್ಷತಾ ಸಾಧನಗಳಿಗೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಹೀಗಾಗಿ ಶುಲ್ಕ ಹೆಚ್ಚಳವಾಗಿದೆ. ಇನ್ನು ಮುಂದೆ ಸರ್ಕಾರ ನಿಗದಿಪಡಿಸಿದ ದರವನ್ನೇ ಪಡೆಯಲಾಗುವುದು’ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ಪರೀಕ್ಷೆಗೆ ಹೆಚ್ಚುವರಿಯಾಗಿ ಪಡೆದ ಹಣವನ್ನು ಪರೀಕ್ಷೆ ಮಾಡಿಸಿಕೊಂಡವರಿಗೆ ವಾಪಸ್ ನೀಡಬೇಕು ಎಂದು ವಿಕ್ರಮ್ ಆಸ್ಪತ್ರೆಗೆ ಅಧಿಕಾರಿಗಳ ತಂಡ ಸೂಚಿಸಿದೆ. ಇದಕ್ಕೆ ಆಸ್ಪತ್ರೆ ಕೂಡ ಸಮ್ಮತಿ ಸೂಚಿಸಿದೆ.</p>.<p>ನಗರದ ವಿಕ್ರಮ್ ಆಸ್ಪತ್ರೆಯಲ್ಲಿಕೋವಿಡ್ ಪರೀಕ್ಷೆಗೆ ಅಧಿಕ ಶುಲ್ಕ ಪಡೆಯಲಾಗುತ್ತಿದೆ ಎಂಬ ದೂರುಗಳು ಬಂದಿದ್ದರಿಂದ ಅಧಿಕಾರಿಗಳ ತಂಡ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಐಎಎಸ್ ಅಧಿಕಾರಿಮೊಹಮದ್ ಮೊಹಿಸಿನ್ ಹಾಗೂ ಐಪಿಎಸ್ ಅಧಿಕಾರಿ ಪಿ.ಹರಿಶೇಖರನ್ ನೇತೃತ್ವದ ತಂಡ ಅಲ್ಲಿನ ವೈದ್ಯಾಧಿಕಾರಿಗಳಿಂದ ಈ ಬಗ್ಗೆ ಮಾಹಿತಿ ಪಡೆದುಕೊಂಡಿತು. ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಅಧಿಕ ಹಣ ಪಡೆದಲ್ಲಿ ಕಟ್ಟುನಿಟ್ಟಾದ ಕ್ರಮಕೈಗೊಳ್ಳ<br />ಲಾಗುವುದು ಎಂದು ಎಚ್ಚರಿಸಿ, ಹೆಚ್ಚುವರಿ ಹಣವನ್ನು ಪರೀಕ್ಷೆ ಮಾಡಿಸಿಕೊಂಡವರಿಗೆ ವಾಪಸ್ ನೀಡುವಂತೆ ಅಧಿಕಾರಿಗಳು ಸೂಚಿಸಿದರು.</p>.<p>‘ಕೋವಿಡ್ ಪರೀಕ್ಷೆ ದರ ಇಳಿಕೆ ಮಾಡಿದ ಬಳಿಕವೂ ಆಸ್ಪತ್ರೆಯವರು ₹ 5,500 ಶುಲ್ಕವನ್ನು 44 ಮಂದಿಯಿಂದ ವಸೂಲಿ ಮಾಡಿರುವುದು ಗಮನಕ್ಕೆ ಬಂದಿದೆ. ಐಸಿಎಂಆರ್ ಹಾಗೂ ರಾಜ್ಯ ಸರ್ಕಾರ ನಿಗದಿಪಡಿಸಿದಷ್ಟು ದರವನ್ನು ಮಾತ್ರ ಪಡೆದು, ಉಳಿದ ಹಣವನ್ನು ಪರೀಕ್ಷೆ ಮಾಡಿಸಿಕೊಂಡವರಿಗೆ ವಾಪಸ್ ಮಾಡುವಂತೆ ಸೂಚಿಸಿದ್ದೇವೆ. ಅದಕ್ಕೆ ಆಸ್ಪತ್ರೆಯವರು ಕೂಡ ಒಪ್ಪಿದ್ದಾರೆ’ ಎಂದುಮೊಹಮದ್ ಮೊಹಿಸಿನ್ ತಿಳಿಸಿದರು.</p>.<p><strong>ಸರ್ಕಾರದ ಸೂಚನೆಗೆ ಬದ್ಧ:</strong> ಈ ಬಗ್ಗೆ ಸ್ಪಷ್ಟನೆ ನೀಡಿರುವ ವಿಕ್ರಮ್ ಆಸ್ಪತ್ರೆ, ‘ಆರ್ಟಿಪಿಸಿಆರ್ ಪರೀಕ್ಷೆಯ ವರದಿ ಬರಲು 24ರಿಂದ 34 ಗಂಟೆಗಳು ಬೇಕಾಗುತ್ತವೆ ಎಂಬ ಕಾರಣಕ್ಕೆ ಸಿಬಿ–ನಾಟ್ ತಂತ್ರದ ಮೂಲಕ ಪರೀಕ್ಷೆ ಮಾಡಲಾಯಿತು. ಇದು ಆನುವಂಶಿಕ ಪರೀಕ್ಷಾ ವಿಧಾನವಾಗಿದ್ದು, 2 ಗಂಟೆಯಲ್ಲಿಯೇ ವರದಿ ನೀಡಲು ಸಾಧ್ಯವಾಗುತ್ತದೆ. ಪರೀಕ್ಷಾ ವಿಧಾನ ಮತ್ತು ಕಿಟ್ಗೆ ₹ 3,100ರ ಜತೆಗ ಸಾರಿಗೆ ಹಾಗೂ ವೈಯಕ್ತಿಕ ಸುರಕ್ಷತಾ ಸಾಧನಗಳಿಗೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಹೀಗಾಗಿ ಶುಲ್ಕ ಹೆಚ್ಚಳವಾಗಿದೆ. ಇನ್ನು ಮುಂದೆ ಸರ್ಕಾರ ನಿಗದಿಪಡಿಸಿದ ದರವನ್ನೇ ಪಡೆಯಲಾಗುವುದು’ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>