‘ಹೊಸ ಮಾರುಕಟ್ಟೆಯನ್ನು ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಿ ಹಲವು ವರ್ಷಗಳೇ ಕಳೆದಿವೆ. ಆರು ತಿಂಗಳಲ್ಲಿ, ಒಂದು ವರ್ಷದಲ್ಲಿ ಮಳಿಗೆಗಳನ್ನು ಹಸ್ತಾಂತರ ಮಾಡಲಾಗುವುದು ಎಂದು ಬಿಬಿಎಂಪಿಯವರು ಭರವಸೆ ಕೊಡುತ್ತಲೇ ಬರುತ್ತಿದ್ದಾರೆ. ಆದರೆ, ಈವರೆಗೂ ಈ ಕಾರ್ಯಕ್ಕೆ ಮುಂದಾಗಿಲ್ಲ. ಹೊಸದಾಗಿ ನಿರ್ಮಿಸಲಾದ ಮಾರುಕಟ್ಟೆಯ ಮೇಲು ಹೊದಿಕೆಯೂ ಹಾಳಾಗುತ್ತಿದೆ’ ಎಂದು ವರ್ತಕರ ಮುಖಂಡ ಎನ್.ಎಸ್. ರವಿ ಹೇಳಿದರು.