<p><strong>ಬೆಂಗಳೂರು:</strong> ‘ಬೇಕೇ ಬೇಕು, ಕಾಕ್ಸ್ಟೌನ್ ಮಾರ್ಕೆಟ್ ಬೇಕು’ ಎಂಬ ಘೋಷಣೆ ಕೂಗುತ್ತಾ ಸೋಮವಾರ ಪ್ರತಿಭಟನೆ ನಡೆಸಿದ ವ್ಯಾಪಾರಿಗಳು, ಸೊಪ್ಪು, ತರಕಾರಿಯನ್ನು ಬೀದಿಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಕ್ಸ್ಟೌನ್ನ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದವರ ಗಾಡಿಗಳನ್ನು ತೆರವುಗೊಳಿಸಿದ್ದ ಬಿಬಿಎಂಪಿಯು, 17 ವರ್ಷಗಳ ಹಿಂದೆ ಇಲ್ಲಿ 28 ಮಳಿಗೆಗಳನ್ನು ಒಳಗೊಂಡ ಹೊಸ ಮಾರುಕಟ್ಟೆ ನಿರ್ಮಿಸಿದೆ. ಆದರೆ, ಈವರೆಗೆ ಮಳಿಗೆಗಳನ್ನು ಹಸ್ತಾಂತರಿಸಿಲ್ಲ ಎಂದು ವ್ಯಾಪಾರಿಗಳು ದೂರಿದರು.</p>.<p>‘ಹೊಸ ಮಾರುಕಟ್ಟೆಯನ್ನು ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಿ ಹಲವು ವರ್ಷಗಳೇ ಕಳೆದಿವೆ. ಆರು ತಿಂಗಳಲ್ಲಿ, ಒಂದು ವರ್ಷದಲ್ಲಿ ಮಳಿಗೆಗಳನ್ನು ಹಸ್ತಾಂತರ ಮಾಡಲಾಗುವುದು ಎಂದು ಬಿಬಿಎಂಪಿಯವರು ಭರವಸೆ ಕೊಡುತ್ತಲೇ ಬರುತ್ತಿದ್ದಾರೆ. ಆದರೆ, ಈವರೆಗೂ ಈ ಕಾರ್ಯಕ್ಕೆ ಮುಂದಾಗಿಲ್ಲ. ಹೊಸದಾಗಿ ನಿರ್ಮಿಸಲಾದ ಮಾರುಕಟ್ಟೆಯ ಮೇಲು ಹೊದಿಕೆಯೂ ಹಾಳಾಗುತ್ತಿದೆ’ ಎಂದು ವರ್ತಕರ ಮುಖಂಡ ಎನ್.ಎಸ್. ರವಿ ಹೇಳಿದರು.</p>.<p>‘ಈಗ ಬೀದಿ ಬದಿಯಲ್ಲಿಯೇ ವ್ಯಾಪಾರ ಮಾಡುತ್ತಿದ್ದೇವೆ. ಇದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಪಾದಚಾರಿ ಮಾರ್ಗದಲ್ಲಿಯೇ ವ್ಯಾಪಾರ ಮಾಡಬೇಕಾಗಿರುವುದರಿಂದ ಸಾರ್ವಜನಿಕರಿಗೂ ತೊಂದರೆಯಾಗುತ್ತಿದೆ’ ಎಂದು ವರ್ತಕರು ಅಳಲು ತೋಡಿಕೊಂಡರು.</p>.<p>‘ಈಗಕುಡಿಯುವ ನೀರು, ಶೌಚಾಲಯದ ಸಮಸ್ಯೆ ಇದೆ. ಹೊಸ ಮಾರುಕಟ್ಟೆಯಲ್ಲಿ ಮಳಿಗೆಗಳನ್ನು ನೀಡಿದರೆ ಅನುಕೂಲವಾಗುತ್ತದೆ’ ಎಂದೂ ಅವರು ಹೇಳಿದರು.</p>.<p>‘ಪಾಲಿಕೆ ಆಯುಕ್ತರಿಗೆ ಈ ಬಗ್ಗೆ ಮನವಿ ಮಾಡಿದ್ದೇವೆ. ಬೇಡಿಕೆ ಈಡೇರದಿದ್ದರೆ ಒಂದು ವಾರದೊಳಗೆ ಅವರ ಕಚೇರಿಯ ಎದುರೇ ಮತ್ತೊಮ್ಮೆ ಪ್ರತಿಭಟಿಸಲು ನಿರ್ಧರಿಸಿದ್ದೇವೆ’ ಎಂದು ರವಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬೇಕೇ ಬೇಕು, ಕಾಕ್ಸ್ಟೌನ್ ಮಾರ್ಕೆಟ್ ಬೇಕು’ ಎಂಬ ಘೋಷಣೆ ಕೂಗುತ್ತಾ ಸೋಮವಾರ ಪ್ರತಿಭಟನೆ ನಡೆಸಿದ ವ್ಯಾಪಾರಿಗಳು, ಸೊಪ್ಪು, ತರಕಾರಿಯನ್ನು ಬೀದಿಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಕ್ಸ್ಟೌನ್ನ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದವರ ಗಾಡಿಗಳನ್ನು ತೆರವುಗೊಳಿಸಿದ್ದ ಬಿಬಿಎಂಪಿಯು, 17 ವರ್ಷಗಳ ಹಿಂದೆ ಇಲ್ಲಿ 28 ಮಳಿಗೆಗಳನ್ನು ಒಳಗೊಂಡ ಹೊಸ ಮಾರುಕಟ್ಟೆ ನಿರ್ಮಿಸಿದೆ. ಆದರೆ, ಈವರೆಗೆ ಮಳಿಗೆಗಳನ್ನು ಹಸ್ತಾಂತರಿಸಿಲ್ಲ ಎಂದು ವ್ಯಾಪಾರಿಗಳು ದೂರಿದರು.</p>.<p>‘ಹೊಸ ಮಾರುಕಟ್ಟೆಯನ್ನು ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಿ ಹಲವು ವರ್ಷಗಳೇ ಕಳೆದಿವೆ. ಆರು ತಿಂಗಳಲ್ಲಿ, ಒಂದು ವರ್ಷದಲ್ಲಿ ಮಳಿಗೆಗಳನ್ನು ಹಸ್ತಾಂತರ ಮಾಡಲಾಗುವುದು ಎಂದು ಬಿಬಿಎಂಪಿಯವರು ಭರವಸೆ ಕೊಡುತ್ತಲೇ ಬರುತ್ತಿದ್ದಾರೆ. ಆದರೆ, ಈವರೆಗೂ ಈ ಕಾರ್ಯಕ್ಕೆ ಮುಂದಾಗಿಲ್ಲ. ಹೊಸದಾಗಿ ನಿರ್ಮಿಸಲಾದ ಮಾರುಕಟ್ಟೆಯ ಮೇಲು ಹೊದಿಕೆಯೂ ಹಾಳಾಗುತ್ತಿದೆ’ ಎಂದು ವರ್ತಕರ ಮುಖಂಡ ಎನ್.ಎಸ್. ರವಿ ಹೇಳಿದರು.</p>.<p>‘ಈಗ ಬೀದಿ ಬದಿಯಲ್ಲಿಯೇ ವ್ಯಾಪಾರ ಮಾಡುತ್ತಿದ್ದೇವೆ. ಇದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಪಾದಚಾರಿ ಮಾರ್ಗದಲ್ಲಿಯೇ ವ್ಯಾಪಾರ ಮಾಡಬೇಕಾಗಿರುವುದರಿಂದ ಸಾರ್ವಜನಿಕರಿಗೂ ತೊಂದರೆಯಾಗುತ್ತಿದೆ’ ಎಂದು ವರ್ತಕರು ಅಳಲು ತೋಡಿಕೊಂಡರು.</p>.<p>‘ಈಗಕುಡಿಯುವ ನೀರು, ಶೌಚಾಲಯದ ಸಮಸ್ಯೆ ಇದೆ. ಹೊಸ ಮಾರುಕಟ್ಟೆಯಲ್ಲಿ ಮಳಿಗೆಗಳನ್ನು ನೀಡಿದರೆ ಅನುಕೂಲವಾಗುತ್ತದೆ’ ಎಂದೂ ಅವರು ಹೇಳಿದರು.</p>.<p>‘ಪಾಲಿಕೆ ಆಯುಕ್ತರಿಗೆ ಈ ಬಗ್ಗೆ ಮನವಿ ಮಾಡಿದ್ದೇವೆ. ಬೇಡಿಕೆ ಈಡೇರದಿದ್ದರೆ ಒಂದು ವಾರದೊಳಗೆ ಅವರ ಕಚೇರಿಯ ಎದುರೇ ಮತ್ತೊಮ್ಮೆ ಪ್ರತಿಭಟಿಸಲು ನಿರ್ಧರಿಸಿದ್ದೇವೆ’ ಎಂದು ರವಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>