‘ರಾಜ್ಯದ ವಲಸೆ ಕಾರ್ಮಿಕರಕಟ್ಟಡಕಾರ್ಮಿಕಕುಟುಂಬಗಳಿಗೆ ಪ್ರತಿ ತಿಂಗಳಿಗೆ ₹10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯದಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಮೇ 15 ರಿಂದ ತೀವ್ರ ಹೋರಾಟ ನಡೆಸುತ್ತಿದ್ದರೂ ಇದೀಗ ಸರ್ಕಾರ ಕೇವಲ ₹3000 ಪರಿಹಾರ ಘೋಷಿಸಿದೆ. ಇದನ್ನು ಮಾರ್ಪಡಿಸಿ, ಕೂಡಲೇ 10 ಸಾವಿರ ಘೋಷಿಸಬೇಕು ಎಂದು ಒತ್ತಾಯಿಸಿ, ಇದೇ 21ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು‘ ಎಂದು ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿಯ ಕೆ. ಮಹಾಂತೇಶ್ ತಿಳಿಸಿದ್ದಾರೆ.