<p><strong>ಬೆಂಗಳೂರು:</strong> ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರಕಟಿಸಿರುವ ಕೋವಿಡ್ ಪರಿಹಾರವು ಅರೆ ಬರೆ ಪ್ಯಾಕೇಜ್ ಆಗಿದೆ. ಈ ಪ್ಯಾಕೇಜ್ ಜನತೆಯ ಜೀವನ ಉಳಿಸದು ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಟೀಸಿದೆ.</p>.<p>’ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ರಾಜ್ಯದ ಪ್ರತಿ ಕುಟುಂಬಕ್ಕೆ ಮಾಸಿಕ ₹10 ಸಾವಿರ ಪರಿಹಾರವನ್ನು ಕನಿಷ್ಠ 6 ತಿಂಗಳು ನೀಡಬೇಕು ಮತ್ತು ಪ್ರತಿಯೊಂದು ಕುಟುಂಬಕ್ಕೂ ತಲಾ 10 ಕೆಜಿ ಉಚಿತ ಪಡಿತರ ನೀಡಬೇಕು. ಉದ್ಯೋಗ ಖಾತ್ರಿ ಕೆಲಸವನ್ನು ದಿನಕ್ಕೆ ₹600 ಕೂಲಿಯೊಂದಿಗೆ 200 ದಿನಗಳಿಗೆ ಹೆಚ್ಚಿಸಿ ನಗರ ಪ್ರದೇಶಕ್ಕೂ ವಿಸ್ತರಿಸಬೇಕು’ ಎಂದು ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿ ಕಾರ್ಯದರ್ಶಿ ಕೆ.ಎನ್. ಉಮೇಶ್ ಒತ್ತಾಯಿಸಿದ್ದಾರೆ.</p>.<p class="Subhead">ನಾಳೆ ಪ್ರತಿಭಟನೆ:</p>.<p>‘ರಾಜ್ಯದ ವಲಸೆ ಕಾರ್ಮಿಕರಕಟ್ಟಡಕಾರ್ಮಿಕಕುಟುಂಬಗಳಿಗೆ ಪ್ರತಿ ತಿಂಗಳಿಗೆ ₹10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯದಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಮೇ 15 ರಿಂದ ತೀವ್ರ ಹೋರಾಟ ನಡೆಸುತ್ತಿದ್ದರೂ ಇದೀಗ ಸರ್ಕಾರ ಕೇವಲ ₹3000 ಪರಿಹಾರ ಘೋಷಿಸಿದೆ. ಇದನ್ನು ಮಾರ್ಪಡಿಸಿ, ಕೂಡಲೇ 10 ಸಾವಿರ ಘೋಷಿಸಬೇಕು ಎಂದು ಒತ್ತಾಯಿಸಿ, ಇದೇ 21ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು‘ ಎಂದು ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿಯ ಕೆ. ಮಹಾಂತೇಶ್ ತಿಳಿಸಿದ್ದಾರೆ.</p>.<p>‘ರಾಜ್ಯದ ಕಾರ್ಮಿಕ ನಿರೀಕ್ಷಕರ ಕಚೇರಿಗಳು ಮತ್ತು ಜಿಲ್ಲಾ ಕಾರ್ಮಿಕಾಧಿಕಾರಿಗಳ ಕಚೇರಿ ಹಾಗೂ ಬೆಂಗಳೂರಿನ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಮುಂದೆ ದೈಹಿಕ ಅಂತರ ಕಾಪಾಡಿಕೊಂಡು ಪ್ರತಿಭಟನೆ ನಡೆಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರಕಟಿಸಿರುವ ಕೋವಿಡ್ ಪರಿಹಾರವು ಅರೆ ಬರೆ ಪ್ಯಾಕೇಜ್ ಆಗಿದೆ. ಈ ಪ್ಯಾಕೇಜ್ ಜನತೆಯ ಜೀವನ ಉಳಿಸದು ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಟೀಸಿದೆ.</p>.<p>’ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ರಾಜ್ಯದ ಪ್ರತಿ ಕುಟುಂಬಕ್ಕೆ ಮಾಸಿಕ ₹10 ಸಾವಿರ ಪರಿಹಾರವನ್ನು ಕನಿಷ್ಠ 6 ತಿಂಗಳು ನೀಡಬೇಕು ಮತ್ತು ಪ್ರತಿಯೊಂದು ಕುಟುಂಬಕ್ಕೂ ತಲಾ 10 ಕೆಜಿ ಉಚಿತ ಪಡಿತರ ನೀಡಬೇಕು. ಉದ್ಯೋಗ ಖಾತ್ರಿ ಕೆಲಸವನ್ನು ದಿನಕ್ಕೆ ₹600 ಕೂಲಿಯೊಂದಿಗೆ 200 ದಿನಗಳಿಗೆ ಹೆಚ್ಚಿಸಿ ನಗರ ಪ್ರದೇಶಕ್ಕೂ ವಿಸ್ತರಿಸಬೇಕು’ ಎಂದು ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿ ಕಾರ್ಯದರ್ಶಿ ಕೆ.ಎನ್. ಉಮೇಶ್ ಒತ್ತಾಯಿಸಿದ್ದಾರೆ.</p>.<p class="Subhead">ನಾಳೆ ಪ್ರತಿಭಟನೆ:</p>.<p>‘ರಾಜ್ಯದ ವಲಸೆ ಕಾರ್ಮಿಕರಕಟ್ಟಡಕಾರ್ಮಿಕಕುಟುಂಬಗಳಿಗೆ ಪ್ರತಿ ತಿಂಗಳಿಗೆ ₹10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯದಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಮೇ 15 ರಿಂದ ತೀವ್ರ ಹೋರಾಟ ನಡೆಸುತ್ತಿದ್ದರೂ ಇದೀಗ ಸರ್ಕಾರ ಕೇವಲ ₹3000 ಪರಿಹಾರ ಘೋಷಿಸಿದೆ. ಇದನ್ನು ಮಾರ್ಪಡಿಸಿ, ಕೂಡಲೇ 10 ಸಾವಿರ ಘೋಷಿಸಬೇಕು ಎಂದು ಒತ್ತಾಯಿಸಿ, ಇದೇ 21ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು‘ ಎಂದು ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿಯ ಕೆ. ಮಹಾಂತೇಶ್ ತಿಳಿಸಿದ್ದಾರೆ.</p>.<p>‘ರಾಜ್ಯದ ಕಾರ್ಮಿಕ ನಿರೀಕ್ಷಕರ ಕಚೇರಿಗಳು ಮತ್ತು ಜಿಲ್ಲಾ ಕಾರ್ಮಿಕಾಧಿಕಾರಿಗಳ ಕಚೇರಿ ಹಾಗೂ ಬೆಂಗಳೂರಿನ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಮುಂದೆ ದೈಹಿಕ ಅಂತರ ಕಾಪಾಡಿಕೊಂಡು ಪ್ರತಿಭಟನೆ ನಡೆಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>