ಸಿಪಿಐ(ಎಂ) ರಾಜ್ಯ ಮುಖಂಡ ಡಾ.ಕೆ.ಪ್ರಕಾಶ್ ಮಾತನಾಡಿ, ‘ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿರುವ ಈ ಮಸೂದೆಯು, ಸಂವಿಧಾನ ಬದಲಿಸುವ ಬಿಜೆಪಿಯ ರಹಸ್ಯ ಕಾರ್ಯಸೂಚಿಯ ಭಾಗವಾಗಿದೆ’ ಎಂದರು. ‘ಅಂತರ್ಜಾತಿ ಹಾಗೂ ಅಂತರ್ ಧರ್ಮೀಯ ವಿವಾಹಗಳನ್ನು ತಡೆಯುವ ದುರುದ್ದೇಶ ಹೊಂದಲಾಗಿದ್ದು, ಮಸೂದೆಯು ಮಾನವ ಹಕ್ಕುಗಳನ್ನು ನಿರಾಕರಿಸುವ ಅಪಾಯಕಾರಿ ಅಂಶಗಳನ್ನು ಒಳಗೊಂಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.