‘ಸರ್ಕಾರವು ಪ್ರತಿ ಕುಟುಂಬಕ್ಕೆ ತಲಾ ₹10 ಸಾವಿರ ಪರಿಹಾರ ಒದಗಿಸಬೇಕು. ತಲಾ 10 ಕೆ.ಜಿ.ಪಡಿತರವನ್ನು ಉಚಿತವಾಗಿ ನೀಡಬೇಕು. 200 ದಿನಗಳಿಗೆ ಉದ್ಯೋಗ ಖಾತರಿ ಯೋಜನೆ ಜಾರಿಗೊಳಿಸಬೇಕು. ಅದನ್ನು ನಗರಕ್ಕೂ ವಿಸ್ತರಿಸಬೇಕು. ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಶಿಕ್ಷಣದಿಂದ ವಿಮುಖರಾಗದಂತೆ ಕ್ರಮ ಕೈಗೊಳ್ಳಬೇಕು. ಅವರ ದಾಖಲಾತಿ ಶುಲ್ಕಗಳನ್ನು ಮನ್ನಾ ಮಾಡಬೇಕು. ಕಾರ್ಮಿಕ ಸಂಹಿತೆ ಜಾರಿಗೆ ತಡೆ ನೀಡಬೇಕು. ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ತಿದ್ದುಪಡಿ, ಮತಾಂತರ ನಿಷೇಧ, ಜಾನುವಾರು ಹತ್ಯೆ ಮಸೂದೆಗಳನ್ನು ಹಿಂಪಡೆಯಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.