ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಂಜನ್ ಶೆಟ್ಟಿ, ‘ತುರ್ತು ಸಹಾಯ (ಎಸ್ಒಎಸ್) ಕ್ಯೂಆರ್ ಕೋಡ್ ವ್ಯವಸ್ಥೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಹೃದಯದ ಸಮಸ್ಯೆ ಕಾಣಿಸಿಕೊಂಡಾಗ ಪ್ರಾಥಮಿಕ ಅಥವಾ ತುರ್ತು ಚಿಕಿತ್ಸೆಗೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ವೈದ್ಯಕೀಯ ಸೇವೆ ಪಡೆದುಕೊಳ್ಳಬಹುದು. ವ್ಯಕ್ತಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುತ್ತಿದ್ದಂತೆಯೇ ತುರ್ತು ಸಂಖ್ಯೆಗೆ ಸಂಪರ್ಕ ಕಲ್ಪಿಸಿ, ಆಂಬುಲೆನ್ಸ್ ಸೇವೆಗೆ ನಿರ್ದೇಶಿಸಲಾಗು ತ್ತದೆ. ಇನ್ನಷ್ಟು ಸಂಚಾರ ಪೊಲೀಸರಿಗೆ ಸಿಪಿಆರ್ ತರಬೇತಿ ನೀಡಲಾಗುತ್ತದೆ. ಈ ಮೂಲಕ ನಗರವನ್ನು ‘ಹಾರ್ಟ್ ಸ್ಮಾರ್ಟ್ ಸಿಟಿ’ಯನ್ನಾಗಿ ಪರಿವರ್ತಿಸಲಾಗುತ್ತದೆ’ ಎಂದು ತಿಳಿಸಿದರು.