ಬೆಂಗಳೂರು: ರಾಜ್ಯದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಲು ಅವಕಾಶ ನೀಡಲಾಗಿದ್ದು, ನಿಯಮ ಉಲ್ಲಂಘಿಸಿ ಹೆಚ್ಚಿನ ಶಬ್ದ ಮತ್ತು ಮಾಲಿನ್ಯ ಉಂಟು ಮಾಡುವ ಪಟಾಕಿಗಳನ್ನು ಸಿಡಿಸಿದರೆ ಅಂತಹವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಲಿದ್ದಾರೆ.
ನಿಯಮ ಉಲ್ಲಂಘಿಸುವವರ ವಿರುದ್ಧ ಸಹಾನುಭೂತಿ ತೋರಬಾರದು. ಶಬ್ದ ಮಾಲಿನ್ಯ ತಡೆಗಟ್ಟಲು ಪೊಲೀಸರ ಜತೆಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯೂ ಕ್ರಮ ತೆಗೆದುಕೊಳ್ಳಲಿದೆ ಎಂದು ಸರ್ಕಾರ ಹೊಸದಾಗಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.