<p><strong>ಬೆಂಗಳೂರು:</strong> ರಸ್ತೆಯಲ್ಲಿ ಹೋಗುತ್ತಿದ್ದಾಗ ರಾಕೆಟ್ (ಪಟಾಕಿ) ಬಂದು ಬಡಿದ ಕಾರಣ 28 ವರ್ಷದ ಯುವತಿ ನಾಗವೇಣಿ ಅವರ ಬಲಗಣ್ಣಿಗೆ ತೀವ್ರ ಗಾಯವಾಗಿದೆ.</p>.<p>‘ಸಿದ್ದಾಪುರದ ಬಳಿ ನಡೆದು ಹೋಗುತ್ತಿದ್ದ ಸಂದರ್ಭದಲ್ಲಿ ಪಟಾಕಿ ಬಂದು ಕಣ್ಣಿಗೆ ಬಡಿಯಿತು. ವೈದ್ಯರು ಶುಕ್ರವಾರ, ಶಸ್ತ್ರಚಿಕಿತ್ಸೆ ನಡೆಸಲಿದ್ದಾರೆ’ ಎಂದು ನಾಗವೇಣಿ ಅವರ ಸಂಬಂಧಿ ಮಾಹಿತಿ ನೀಡಿದರು.</p>.<p><strong>ಹೆಚ್ಚಿದ ಪ್ರಕರಣಗಳು:</strong> ಪಟಾಕಿಯಿಂದ ಗಾಯಗೊಂಡವರ ಸಂಖ್ಯೆ ಗುರುವಾರಕ್ಕೆ ಮತ್ತಷ್ಟು ಹೆಚ್ಚಿದೆ. ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ಈವರೆಗೆ 26 ಮಂದಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇದರಲ್ಲಿ ನಾಲ್ವರನ್ನು ದಾಖಲಿಸಿಕೊಳ್ಳಲಾಗಿದೆ. ಒಬ್ಬ ಬಾಲಕಿ ಶಾಶ್ವತವಾಗಿ ಒಂದು ಕಣ್ಣನ್ನು ಕಳೆದುಕೊಂಡಿದ್ದಾಳೆ.</p>.<p>ಮೋದಿ ಐ ಕೇರ್ನಲ್ಲಿ ಮೂವರು ಹಾಗೂ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಈವರೆಗೆ ನಾಲ್ಕು ಮಂದಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 32 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇದರಲ್ಲಿ 31 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p><strong>ಎರಡೂ ಕಣ್ಣಿಗೆ ಹಾನಿ:</strong> ನಾರಾಯಣ ನೇತ್ರಾಲಯದಲ್ಲಿ ದಾಖಲಾಗಿರುವ ಹೆಗ್ಗನಹಳ್ಳಿಯ 40 ವರ್ಷದ ವ್ಯಕ್ತಿಗೆ ಹೂವಿನಕುಂಡ ತಗುಲಿದ ಕಾರಣ ಎರಡೂ ಕಣ್ಣಿಗೆ ಗಾಯವಾಗಿದೆ. ‘ಎಡಭಾಗದ ಕಣ್ಣಿಗೆ ಹೆಚ್ಚು ಹಾನಿಯಾಗಿಲ್ಲ. ಆದರೆ ಬಲಗಡೆ ಕಣ್ಣಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು’ ಎಂದು ವೈದ್ಯರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಸ್ತೆಯಲ್ಲಿ ಹೋಗುತ್ತಿದ್ದಾಗ ರಾಕೆಟ್ (ಪಟಾಕಿ) ಬಂದು ಬಡಿದ ಕಾರಣ 28 ವರ್ಷದ ಯುವತಿ ನಾಗವೇಣಿ ಅವರ ಬಲಗಣ್ಣಿಗೆ ತೀವ್ರ ಗಾಯವಾಗಿದೆ.</p>.<p>‘ಸಿದ್ದಾಪುರದ ಬಳಿ ನಡೆದು ಹೋಗುತ್ತಿದ್ದ ಸಂದರ್ಭದಲ್ಲಿ ಪಟಾಕಿ ಬಂದು ಕಣ್ಣಿಗೆ ಬಡಿಯಿತು. ವೈದ್ಯರು ಶುಕ್ರವಾರ, ಶಸ್ತ್ರಚಿಕಿತ್ಸೆ ನಡೆಸಲಿದ್ದಾರೆ’ ಎಂದು ನಾಗವೇಣಿ ಅವರ ಸಂಬಂಧಿ ಮಾಹಿತಿ ನೀಡಿದರು.</p>.<p><strong>ಹೆಚ್ಚಿದ ಪ್ರಕರಣಗಳು:</strong> ಪಟಾಕಿಯಿಂದ ಗಾಯಗೊಂಡವರ ಸಂಖ್ಯೆ ಗುರುವಾರಕ್ಕೆ ಮತ್ತಷ್ಟು ಹೆಚ್ಚಿದೆ. ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ಈವರೆಗೆ 26 ಮಂದಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇದರಲ್ಲಿ ನಾಲ್ವರನ್ನು ದಾಖಲಿಸಿಕೊಳ್ಳಲಾಗಿದೆ. ಒಬ್ಬ ಬಾಲಕಿ ಶಾಶ್ವತವಾಗಿ ಒಂದು ಕಣ್ಣನ್ನು ಕಳೆದುಕೊಂಡಿದ್ದಾಳೆ.</p>.<p>ಮೋದಿ ಐ ಕೇರ್ನಲ್ಲಿ ಮೂವರು ಹಾಗೂ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಈವರೆಗೆ ನಾಲ್ಕು ಮಂದಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 32 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇದರಲ್ಲಿ 31 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p><strong>ಎರಡೂ ಕಣ್ಣಿಗೆ ಹಾನಿ:</strong> ನಾರಾಯಣ ನೇತ್ರಾಲಯದಲ್ಲಿ ದಾಖಲಾಗಿರುವ ಹೆಗ್ಗನಹಳ್ಳಿಯ 40 ವರ್ಷದ ವ್ಯಕ್ತಿಗೆ ಹೂವಿನಕುಂಡ ತಗುಲಿದ ಕಾರಣ ಎರಡೂ ಕಣ್ಣಿಗೆ ಗಾಯವಾಗಿದೆ. ‘ಎಡಭಾಗದ ಕಣ್ಣಿಗೆ ಹೆಚ್ಚು ಹಾನಿಯಾಗಿಲ್ಲ. ಆದರೆ ಬಲಗಡೆ ಕಣ್ಣಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು’ ಎಂದು ವೈದ್ಯರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>