‘ನಸುಕಿನಿಂದಲೇ 100ಕ್ಕೂ ಹೆಚ್ಚು ಜನ ಕೆಲಸ ಆರಂಭಿಸಿದ್ದರು. ಕ್ರೇನ್ ಬಿದ್ದ ಜಾಗದಲ್ಲಿ ಯಾರೊಬ್ಬರೂ ಇರಲಿಲ್ಲ. ಹೀಗಾಗಿ, ಯಾವುದೇ ಅನಾಹುತ ಸಂಭವಿಸಿಲ್ಲ. ಆಕಸ್ಮಾತ್ ಯಾರಾದರೂ ಇದ್ದಿದ್ದರೆ, ಸಾವು ಸಂಭವಿಸುವ ಸಾಧ್ಯತೆ ಇತ್ತು. ಕೂಡಲೇ ಎಚ್ಚೆತ್ತ ಸಿಬ್ಬಂದಿಯೇ ಕ್ರೇನ್ ತೆರವು ಮಾಡಿ ಸುರಕ್ಷಿತ ಸ್ಥಳಕ್ಕೆ ಸಾಗಿಸಿದರು. ಬಿಎಂಆರ್ಸಿಎಲ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು. ಘಟನೆ ಬಗ್ಗೆ ದೂರು ಪಡೆದಿದ್ದು, ಕಾನೂನು ಕ್ರಮ ಜರುಗಿಸಲಾಗುವುದು’ ಎಂದೂ ಪೊಲೀಸ್ ಮೂಲಗಳು ಹೇಳಿವೆ.