ಬೆಂಗಳೂರು: ಐಎಎಸ್ ಅಧಿಕಾರಿಗಳ ಒಂದು ಹುದ್ದೆಯ ಕನಿಷ್ಠ ಅವಧಿ ಖಾತರಿಪಡಿಸುವ ಸಂಬಂಧ ಕೇಂದ್ರ ನಾಗರಿಕ ಸೇವಾ ಮಂಡಳಿ ರಚಿಸುವ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೊರ್ಟ್ ನಿರ್ದೇಶನ ನೀಡಿದೆ.
ವಕೀಲರಾದ ಸುಧಾ ಕಟ್ವಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಜೂ.24ರೊಳಗೆ ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶನ ನೀಡಿತು.
‘ಟಿಎಸ್ಆರ್ ಸುಬ್ರಮಣಿಯನ್ ಮತ್ತು ಇತರರ ಪ್ರಕರಣದಲ್ಲಿ 2013ರಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ, ನಾಗರಿಕ ಸೇವೆಗೆ ಕನಿಷ್ಠ ಅಧಿಕಾರವಧಿ ನೀತಿ ರೂಪಿಸಬೇಕು’ ಅರ್ಜಿದಾರರು ಕೋರಿದ್ದಾರೆ.