9ನೇ ವಯಸ್ಸಿನಿಂದಲೇ ಅನಾಥ ಶವಗಳ ಅಂತ್ಯ ಸಂಸ್ಕಾರ ನೆರವೇರಿಸಲಾರಂಭಿಸಿದ್ದ ಮಹದೇವ್ ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯೇ ಮನೆಯಂತಾಗಿತ್ತು. ಅಪಘಾತ, ಆತ್ಮಹತ್ಯೆ ಹೀಗೆ ಹಲವು ಕಾರಣಗಳಿಂದ ಮೃತಪಡುತ್ತಿದ್ದ ಅನಾಥ ಶವಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಕೊಂಡೊಯ್ಯುತ್ತಿದ್ದ ಮಹದೇವ, ಸಂಬಂಧಿಕರ ಸ್ಥಾನದಲ್ಲಿ ನಿಂತು ಅಂತ್ಯಸಂಸ್ಕಾರ ನೆರವೇರಿಸುತ್ತಿದ್ದರು. ಪೊಲೀಸರು ಹಾಗೂ ವೈದ್ಯರು ಮಹದೇವ ಅವರನ್ನು ’ಅನಾಥ ಶವಗಳ ತ್ರಿವಿಕ್ರಮ'ಎಂದೇ ಕರೆಯುತ್ತಿದ್ದರು.