<p><strong>ಬೆಂಗಳೂರು: </strong>ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಮೇಲೆ ಬೆಟ್ಟಿಂಗ್ ಆಡಿಸುತ್ತಿದ್ದ ಆರೋಪದಡಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>‘ಕೆ.ಜಿ. ಹಳ್ಳಿ ಇದಾಯತ್ ನಗರದ ಇಮ್ರಾನ್ ಪಾಷಾ (25), ರಾಣಸಿಂಗ್ ಪೇಟ್ದ ಮೊಹಮ್ಮದ್ ಇರ್ಫಾನ್ (27), ಗುಡ್ಡದಹಳ್ಳಿ ನೆಹರು ರಸ್ತೆಯ ಮುಜಾಮಿಲ್ ಅಹಮ್ಮದ್ (21) ಹಾಗೂ ಸರ್ವಜ್ಞ ನಗರದ ರೋಮನ್ ವಿಮಲ್ರಾಜ್ (29) ಬಂಧಿತರು. ಅವರಿಂದ ₹ 3 ಲಕ್ಷ ನಗದು ಹಾಗೂ 4 ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.</p>.<p>‘ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅ. 7ರಂದು ನಡೆದಿದ್ದ ಪಂದ್ಯದ ಮೇಲೆ ಆರೋಪಿಗಳು ಬೆಟ್ಟಿಂಗ್ ಆಡಿಸಿದ್ದರು. ಮೊಬೈಲ್ ಮೂಲಕ ಸ್ಕೋರ್ ಹಾಗೂ ಪಂದ್ಯದ ಮಾಹಿತಿ ಪಡೆದು ಬೆಟ್ಟಿಂಗ್ ನಡೆಸುತ್ತಿದ್ದರು. ಸೋಲು ಹಾಗೂ ಗೆಲುವು ಲೆಕ್ಕಾಚಾರದಲ್ಲೂ ಹಣ ಕಟ್ಟಿಸಿಕೊಳ್ಳುತ್ತಿದ್ದರು.’</p>.<p>‘ಬೆಟ್ಟಿಂಗ್ನಲ್ಲಿ ಗೆದ್ದವರಿಗೆ ಹಣ ಕೊಡಲು ಹಾಗೂ ಸೋತವರಿಂದ ಹಣ ಪಡೆಯಲು ಆರೋಪಿಗಳೇ ಹೋಗುತ್ತಿದ್ದರು. ಇತ್ತೀಚೆಗೆ ಆರೋಪಿಗಳು ಯಶವಂತಪುರ ಆರ್ಟಿಒ ಕಚೇರಿ ಬಳಿ ಬಂದಿದ್ದರು. ಈ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿ ಅವರನ್ನು ಬಂಧಿಸಲಾಯಿತು. ಅವರ ವಿರುದ್ಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದೂ ಅವರು ತಿಳಿಸಿದರು.</p>.<p class="Subhead"><strong>₹82 ಸಾವಿರ ಜಪ್ತಿ;</strong> ಯಶವಂತಪುರ ಠಾಣೆ ವ್ಯಾಪ್ತಿಯ ಅಕ್ಕಿಯಪ್ಪ ಗಾರ್ಡನ್ ಬಳಿ ಕ್ರಿಕೆಟ್ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ ಆರೋಪಿ ರಾಜಶೇಖರ್ (37) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>‘ಸ್ಥಳೀಯ ನಿವಾಸಿಯಾದ ರಾಜಶೇಖರ್, ಐಪಿಎಲ್ ಆರಂಭವಾದಾಗಿನಿಂದ ಬೆಟ್ಟಿಂಗ್ನಲ್ಲಿ ತೊಡಗಿದ್ದ. ಆತನಿಂದ ₹82 ಸಾವಿರ ನಗದು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಮೇಲೆ ಬೆಟ್ಟಿಂಗ್ ಆಡಿಸುತ್ತಿದ್ದ ಆರೋಪದಡಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>‘ಕೆ.ಜಿ. ಹಳ್ಳಿ ಇದಾಯತ್ ನಗರದ ಇಮ್ರಾನ್ ಪಾಷಾ (25), ರಾಣಸಿಂಗ್ ಪೇಟ್ದ ಮೊಹಮ್ಮದ್ ಇರ್ಫಾನ್ (27), ಗುಡ್ಡದಹಳ್ಳಿ ನೆಹರು ರಸ್ತೆಯ ಮುಜಾಮಿಲ್ ಅಹಮ್ಮದ್ (21) ಹಾಗೂ ಸರ್ವಜ್ಞ ನಗರದ ರೋಮನ್ ವಿಮಲ್ರಾಜ್ (29) ಬಂಧಿತರು. ಅವರಿಂದ ₹ 3 ಲಕ್ಷ ನಗದು ಹಾಗೂ 4 ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.</p>.<p>‘ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅ. 7ರಂದು ನಡೆದಿದ್ದ ಪಂದ್ಯದ ಮೇಲೆ ಆರೋಪಿಗಳು ಬೆಟ್ಟಿಂಗ್ ಆಡಿಸಿದ್ದರು. ಮೊಬೈಲ್ ಮೂಲಕ ಸ್ಕೋರ್ ಹಾಗೂ ಪಂದ್ಯದ ಮಾಹಿತಿ ಪಡೆದು ಬೆಟ್ಟಿಂಗ್ ನಡೆಸುತ್ತಿದ್ದರು. ಸೋಲು ಹಾಗೂ ಗೆಲುವು ಲೆಕ್ಕಾಚಾರದಲ್ಲೂ ಹಣ ಕಟ್ಟಿಸಿಕೊಳ್ಳುತ್ತಿದ್ದರು.’</p>.<p>‘ಬೆಟ್ಟಿಂಗ್ನಲ್ಲಿ ಗೆದ್ದವರಿಗೆ ಹಣ ಕೊಡಲು ಹಾಗೂ ಸೋತವರಿಂದ ಹಣ ಪಡೆಯಲು ಆರೋಪಿಗಳೇ ಹೋಗುತ್ತಿದ್ದರು. ಇತ್ತೀಚೆಗೆ ಆರೋಪಿಗಳು ಯಶವಂತಪುರ ಆರ್ಟಿಒ ಕಚೇರಿ ಬಳಿ ಬಂದಿದ್ದರು. ಈ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿ ಅವರನ್ನು ಬಂಧಿಸಲಾಯಿತು. ಅವರ ವಿರುದ್ಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದೂ ಅವರು ತಿಳಿಸಿದರು.</p>.<p class="Subhead"><strong>₹82 ಸಾವಿರ ಜಪ್ತಿ;</strong> ಯಶವಂತಪುರ ಠಾಣೆ ವ್ಯಾಪ್ತಿಯ ಅಕ್ಕಿಯಪ್ಪ ಗಾರ್ಡನ್ ಬಳಿ ಕ್ರಿಕೆಟ್ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ ಆರೋಪಿ ರಾಜಶೇಖರ್ (37) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>‘ಸ್ಥಳೀಯ ನಿವಾಸಿಯಾದ ರಾಜಶೇಖರ್, ಐಪಿಎಲ್ ಆರಂಭವಾದಾಗಿನಿಂದ ಬೆಟ್ಟಿಂಗ್ನಲ್ಲಿ ತೊಡಗಿದ್ದ. ಆತನಿಂದ ₹82 ಸಾವಿರ ನಗದು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>