ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೈರಸಿ ಕಾಟ; ಠಾಣೆ ಮೆಟ್ಟಿಲೇರಿದ ‘ಪೈಲ್ವಾನ್‌’ ನಿರ್ಮಾಪಕಿ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಿನಿಮಾದ ಲಿಂಕ್
Last Updated 16 ಸೆಪ್ಟೆಂಬರ್ 2019, 19:35 IST
ಅಕ್ಷರ ಗಾತ್ರ

ಬೆಂಗಳೂರು: ಬಹುಭಾಷೆಗಳಲ್ಲಿ ಬಿಡುಗಡೆ ಆಗಿರುವ ನಟ ಸುದೀಪ್ ಅಭಿನಯದ ‘ಪೈಲ್ವಾನ್’ ಸಿನಿಮಾಕ್ಕೆ ಪೈರಸಿ ಕಾಟ ಶುರುವಾಗಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ದಿನವೇ, ಪೂರ್ತಿ ಸಿನಿಮಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದರಿಂದ ಅಸಮಾಧಾನಗೊಂಡಿರುವ ನಿರ್ಮಾಪಕಿ ಸ್ವಪ್ನ ಕೃಷ್ಣ ಅವರು ನಗರದ ಸೈಬರ್ ಕ್ರೈಂ ಠಾಣೆಗೆ ಸೋಮವಾರ ದೂರು ನೀಡಿದ್ದಾರೆ.

‘ಸಾಕಷ್ಟು ಶ್ರಮ ವಹಿಸಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಸಿನಿಮಾ ನಿರ್ಮಿಸಲಾಗಿದೆ. 3 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಸಿನಿಮಾ ತೆರೆಕಂಡಿದೆ. ಯಾರೋ ಕಿಡಿಗೇಡಿಗಳು, ಒಂದೇ ದಿನದಲ್ಲೇ ಸಿನಿಮಾದ ಪೈರಸಿ ಮಾಡಿದ್ದಾರೆ. ಟೆಲಿಗ್ರಾಂ ಆ್ಯಪ್ ಹಾಗೂ ನಾನಾ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್‌ ಮಾಡಿದ್ದಾರೆ’ ಎಂದು ಸ್ವಪ್ನ ಕೃಷ್ಣ ದೂರಿದ್ದಾರೆ.

ಸಿಸಿಬಿಯ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ, ‘ಸಿನಿಮಾದ ಪೈರಸಿ ಲಿಂಕ್‌ ಅನ್ನು ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿದೆ. ಆ ಬಗ್ಗೆ ನಿರ್ಮಾಪಕರು ನೀಡಿರುವ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದರು.

3,500ಕ್ಕೂ ಹೆಚ್ಚು ಲಿಂಕ್‌: ದೂರು ಸಲ್ಲಿಕೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸ್ವಪ್ನ ಕೃಷ್ಣ, ‘ಸಿನಿಮಾದ ಪೈರಸಿಯ 3,500ಕ್ಕೂ ಹೆಚ್ಚು ಲಿಂಕ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಆ ಬಗ್ಗೆ ಪೊಲೀಸರಿಗೂ ತಿಳಿಸಲಾಗಿದೆ’ ಎಂದು ಹೇಳಿದರು.

‘ನಟ ದರ್ಶನ್ ಅಭಿಮಾನಿಗಳು ಪೈರಸಿ ಮಾಡಿದ್ದಾರೆ ಎನ್ನಲಾಗುತ್ತಿದೆ. ನಿಜವೇ?’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರ‍್ಯಾರು ಮಾಡಿಲ್ಲ. ಇದು ಯಾರೋ ಕಿಡಿಗೇಡಿಗಳ ಕೃತ್ಯ. ಯಾರೇ ಪೈರಸಿ ಮಾಡಿದರೂ ಅದು ತಪ್ಪು. ಚಿತ್ರರಂಗದ ಬೆಳವಣಿಗೆಗೆ ಪೈರಸಿ ಮಾರಕ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT