‘ಮಂಗಳವಾರ ಸಂಜೆಯೂ ಹಣ ನೀಡುವಂತೆ ಮನೋಹರ್ಗೆ ಕೇಳಿದ್ದು, ಇಬ್ಬರ ನಡುವೆ ಜಗಳ ತಾರಕಕ್ಕೇರಿತ್ತು. ತಾಳ್ಮೆ ಕಳೆದುಕೊಂಡಿದ್ದ ಮನೋಹರ್, ಮಾಧವ್ ಅವರ ಕುತ್ತಿಗೆಗೆ ದೊಡ್ಡ ಚಾಕುವಿನಿಂದ ಹಲ್ಲೆ ನಡೆಸಿದ್ದ. ಇದರಿಂದ ಗಂಭೀರ ಗಾಯಗೊಂಡು, ರಕ್ತಸ್ರಾವದಿಂದ ಸ್ಥಳದಲ್ಲೇ ಮಾಧವ್ ಕುಸಿದು ಬಿದ್ದಿದ್ದರು. ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದುವ ವೇಳೆ ಮೃತಪಟ್ಟರು. ಆರೋಪಿ ಮನೋಹರ್ನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.