<p><strong>ಬೆಂಗಳೂರು: </strong>ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋಗಿದ್ದ ಕಾನ್ಸ್ಟೆಬಲ್ ಮೇಲೆ ಆರೋಪಿ ಹಾಗೂ ಆತನ ಕುಟುಂಬಸ್ಥರು ಹಲ್ಲೆ ನಡೆಸಿರುವ ಘಟನೆ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ವರ್ತೂರು ಠಾಣೆಯ ಕಾನ್ಸ್ಟೆಬಲ್ ಮಂಜುನಾಥ್ ಹಲ್ಲೆಗೆ ಒಳಗಾದವರು.</p>.<p>ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ನವೀನ್ನನ್ನು ಬಂಧಿಸಲು ಮಂಜುನಾಥ್ ಖಚಿತ ಮಾಹಿತಿ ಮೇರೆಗೆ ಮಂಗಳವಾರ ರಾತ್ರಿ ತೆರಳಿದ್ದರು. ಬಂಧಿಸಿ ಕರೆತರುವಾಗ ಪ್ರತಿರೋಧ ತೋರಿದ್ದನವೀನ್, ತಮ್ಮ ಮುರುಗೇಶ್ ಹಾಗೂ ತಾಯಿ ನರಸಮ್ಮ ದೊಣ್ಣೆಯಿಂದ ಹೊಡೆದಿದ್ದರು. ಬಳಿಕ ನವೀನ್ ಚಾಕುವಿನಿಂದ ಮಂಜುನಾಥ್ಗೆ ಇರಿದು ಪರಾರಿಯಾಗಿದ್ದ.</p>.<p>ಇರಿತದಿಂದ ಮಂಜುನಾಥ್ ಅವರ ಕುತ್ತಿಗೆ, ಕಿವಿ ಹಾಗೂ ತಲೆಗೆ ತೀವ್ರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಪಾಯದಿಂದ ಪಾರಾಗಿದ್ದಾರೆ. ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.</p>.<p>ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಡಿನರಸಮ್ಮ ಹಾಗೂ ಮುರುಗೇಶ್ನನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ನವೀನ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋಗಿದ್ದ ಕಾನ್ಸ್ಟೆಬಲ್ ಮೇಲೆ ಆರೋಪಿ ಹಾಗೂ ಆತನ ಕುಟುಂಬಸ್ಥರು ಹಲ್ಲೆ ನಡೆಸಿರುವ ಘಟನೆ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ವರ್ತೂರು ಠಾಣೆಯ ಕಾನ್ಸ್ಟೆಬಲ್ ಮಂಜುನಾಥ್ ಹಲ್ಲೆಗೆ ಒಳಗಾದವರು.</p>.<p>ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ನವೀನ್ನನ್ನು ಬಂಧಿಸಲು ಮಂಜುನಾಥ್ ಖಚಿತ ಮಾಹಿತಿ ಮೇರೆಗೆ ಮಂಗಳವಾರ ರಾತ್ರಿ ತೆರಳಿದ್ದರು. ಬಂಧಿಸಿ ಕರೆತರುವಾಗ ಪ್ರತಿರೋಧ ತೋರಿದ್ದನವೀನ್, ತಮ್ಮ ಮುರುಗೇಶ್ ಹಾಗೂ ತಾಯಿ ನರಸಮ್ಮ ದೊಣ್ಣೆಯಿಂದ ಹೊಡೆದಿದ್ದರು. ಬಳಿಕ ನವೀನ್ ಚಾಕುವಿನಿಂದ ಮಂಜುನಾಥ್ಗೆ ಇರಿದು ಪರಾರಿಯಾಗಿದ್ದ.</p>.<p>ಇರಿತದಿಂದ ಮಂಜುನಾಥ್ ಅವರ ಕುತ್ತಿಗೆ, ಕಿವಿ ಹಾಗೂ ತಲೆಗೆ ತೀವ್ರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಪಾಯದಿಂದ ಪಾರಾಗಿದ್ದಾರೆ. ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.</p>.<p>ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಡಿನರಸಮ್ಮ ಹಾಗೂ ಮುರುಗೇಶ್ನನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ನವೀನ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>