ಸೋಮವಾರ ರಾತ್ರಿ 8.30ರ ವೇಳೆಗೆ ಜೆ.ಜೆ.ನಗರದ ಬಳಿ ಆಟೊ ಹತ್ತಿದ್ದ ಆರೋಪಿಗಳು, ಕಲಾಸಿಪಾಳ್ಯಕ್ಕೆ ಹೋಗಲು ತಿಳಿಸಿದ್ದರು. ಪ್ರದೀಪ್ ವೃತ್ತದ ಬಳಿ ಬಂದ ಕೂಡಲೇ ಚಾಲಕನಿಗೆ ಚಾಕು ತೋರಿಸಿ ಬೆದರಿಸಿದ್ದರು. ಬಳಿಕ ಚಾಲಕನನ್ನು ಕೆಳಗೆ ಇಳಿಸಿ, ಆಟೊದೊಂದಿಗೆ ಪರಾರಿಯಾಗಿದ್ದರು.
ಈ ಸಂಬಂಧ ಆಟೊ ಚಾಲಕ ಕಲಾಸಿಪಾಳ್ಯ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಆಟೊ ರಿಕ್ಷಾ ಹಾಗೂ ಮಾರಕಾಸ್ತ್ರ ಜಪ್ತಿ ಮಾಡಿದ್ದಾರೆ.