ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಟಲಿ ಚೂರಿನಿಂದ ಸ್ನೇಹಿತನ ಕತ್ತು ಕೊಯ್ದರು

ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಆರೋಪಿಗಳ ಬಂಧನ
Last Updated 15 ಜೂನ್ 2020, 20:32 IST
ಅಕ್ಷರ ಗಾತ್ರ

ಬೆಂಗಳೂರು: ಕೆಂಗೇರಿ ಠಾಣೆ ವ್ಯಾಪ್ತಿ ಯಲ್ಲಿ ನಡೆದಿದ್ದ ಮಣಿ (26) ಎಂಬುವರ ಕೊಲೆ ಪ್ರಕರಣ ಸಂಬಂಧ ಮೃತನ ಮೂವರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯರಾದ ಕೃಷ್ಣಮೂರ್ತಿ ಅಲಿಯಾಸ್ ಬಿರಿಯಾನಿ ಅಪ್ಪಿ (25), ಸಂದೀಪ್ ರೆಡ್ಡಿ ಅಲಿಯಾಸ್ ಕಣ್ಣನ್ (25) ಹಾಗೂ ರೇವಣ ಸಿದ್ದಯ್ಯ (33) ಬಂಧಿತರು.

‘ಬಿರಿಯಾನಿ ಅಂಗಡಿ ಇಟ್ಟು ಕೊಂಡಿದ್ದ ಆರೋಪಿ ಕೃಷ್ಣಮೂರ್ತಿಯ ಪತ್ನಿ ತವರಿಗೆ ಹೋಗಿದ್ದರು. ಮದ್ಯದ ಪಾರ್ಟಿ ಮಾಡಲು ಮುಂದಾಗಿದ್ದ ಆತ, ಮಣಿ ಹಾಗೂ ಇತರೆ ಸ್ನೇಹಿತರನ್ನು ಮೇ 31ರಂದು ಮನೆಗೆ ಕರೆಸಿಕೊಂಡಿದ್ದ’ ಎಂದು ಪೊಲೀಸರು ಹೇಳಿದರು.

‘ಪಾರ್ಟಿ ವೇಳೆ ಮಣಿ ಹೆಚ್ಚು ಮದ್ಯ ಕುಡಿದಿದ್ದ ವಿಚಾರವಾಗಿ ಗಲಾಟೆ ಶುರುವಾಗಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಮತ್ತಿನಲ್ಲಿದ್ದ ಆರೋಪಿಗಳು, 3ಬಿಯರ್ ಬಾಟಲಿಯನ್ನು ಒಡೆದಿದ್ದರು. ಅದರ ಚೂರಿನಿಂದಲೇ ಮಣಿ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿ ದ್ದರು. ಪ್ರಕರಣದಲ್ಲಿ ಮತ್ತಿಬ್ಬರು ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದಾರೆ’ ಎಂದೂ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT