‘ಜಾಲಹಳ್ಳಿಯಲ್ಲಿ ವಾಸವಿದ್ದ ಪಶ್ಚಿಮ ಬಂಗಾಳದ ತಪನ್ ಬಿಸ್ವಾಸ್ ವಂಚನೆಗೆ ಒಳಗಾದ ವ್ಯಕ್ತಿ. ಬಂಧಿತ ತಪಸ್ ಇವರ ಬಳಿಯೇ ಕೆಲಸ ಮಾಡಿಕೊಂಡಿದ್ದು, ಈ ಕೃತ್ಯ ಎಸಗಿದ್ದಾನೆ. ಬಂಧಿತರಿಂದ₹41 ಸಾವಿರ ನಗದು, ಒಂದು ಸ್ಕೂಟರ್ ಹಾಗೂ ಎರಡು ಬೈಕ್ ಜಪ್ತಿ ಮಾಡಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿಸಂಜೀವ್ ಪಾಟೀಲ ತಿಳಿಸಿದರು.