<p><strong>ಕೆ.ಆರ್.ಪುರ:</strong> ಕ್ಷೇತ್ರದ ಜನರು ಶಾಂತಿ ಸೌಹಾರ್ದತೆಯಿಂದ ಬಾಳಲು, ನೆಮ್ಮದಿಯ ನಾಳೆಗಾಗಿ ಅಪರಾಧ ಮುಕ್ತ ಕೆ.ಆರ್.ಪುರವನ್ನು ಮಾಡಲು ಪ್ರತಿಯೊಬ್ಬರೂ ಪಣತೊಡಬೇಕು ಎಂದು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ಕೇಂಬ್ರಿಜ್ ಸಮೂಹ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ‘ಅಪರಾಧ ಮುಕ್ತ ಕೆ.ಆರ್.ಪುರ’ ಮ್ಯಾರಥಾನ್ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಇತ್ತೀಚೆಗೆ ಕೆ.ಆರ್.ಪುರ ಅಪರಾಧ ಚಟುವಟಿಕೆಗಳ ತಾಣವಾಗಿದೆ. ಅವುಗಳನ್ನು ಮಟ್ಟ ಹಾಕಲು ಯುವಕರು ಮುಂದಾಗಬೇಕು ಎಂದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮೋಹನ್ ಮಾತನಾಡಿ, ‘ಸಮಾಜದಲ್ಲಿ ಮುಂಚೂಣಿ ಸ್ಥಾನದಲ್ಲಿ ಇರುವವರೇ ಅಪರಾಧ ಮಾಡುತ್ತಿದ್ದಾರೆ’ ಎಂದರು.</p>.<p>ಕೆ.ಆರ್. ಪುರದ ಐಟಿಐ ಮೈದಾನದಿಂದ ಐದು ಕಿ.ಮೀ. ಮತ್ತು ಎಂಟು ಕಿ.ಮೀ. ಮ್ಯಾರಥಾನ್ ನಡೆಯಿತು. ಓಟದಲ್ಲಿ ಪಾಲ್ಗೊಂಡವರಿಗೆ ಪ್ರಮಾಣಪತ್ರ ವಿತರಿಸಲಾಯಿತು.</p>.<p>ರಾಜ್ಯಸಭೆಯ ಮಾಜಿ ಸದಸ್ಯ ಎಂ.ವಿ. ರಾಜೀವ್ ಗೌಡ, ಬೆಂಗಳೂರು ನಗರ ಕಾಂಗ್ರೆಸ್ ಅಧ್ಯಕ್ಷ ನಂದಕುಮಾರ್, ಮುಖಂಡರಾದ ಅಗರ ಪ್ರಕಾಶ್, ಚನ್ನಕೇಶವ, ವೀರಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಕ್ಷೇತ್ರದ ಜನರು ಶಾಂತಿ ಸೌಹಾರ್ದತೆಯಿಂದ ಬಾಳಲು, ನೆಮ್ಮದಿಯ ನಾಳೆಗಾಗಿ ಅಪರಾಧ ಮುಕ್ತ ಕೆ.ಆರ್.ಪುರವನ್ನು ಮಾಡಲು ಪ್ರತಿಯೊಬ್ಬರೂ ಪಣತೊಡಬೇಕು ಎಂದು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ಕೇಂಬ್ರಿಜ್ ಸಮೂಹ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ‘ಅಪರಾಧ ಮುಕ್ತ ಕೆ.ಆರ್.ಪುರ’ ಮ್ಯಾರಥಾನ್ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಇತ್ತೀಚೆಗೆ ಕೆ.ಆರ್.ಪುರ ಅಪರಾಧ ಚಟುವಟಿಕೆಗಳ ತಾಣವಾಗಿದೆ. ಅವುಗಳನ್ನು ಮಟ್ಟ ಹಾಕಲು ಯುವಕರು ಮುಂದಾಗಬೇಕು ಎಂದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮೋಹನ್ ಮಾತನಾಡಿ, ‘ಸಮಾಜದಲ್ಲಿ ಮುಂಚೂಣಿ ಸ್ಥಾನದಲ್ಲಿ ಇರುವವರೇ ಅಪರಾಧ ಮಾಡುತ್ತಿದ್ದಾರೆ’ ಎಂದರು.</p>.<p>ಕೆ.ಆರ್. ಪುರದ ಐಟಿಐ ಮೈದಾನದಿಂದ ಐದು ಕಿ.ಮೀ. ಮತ್ತು ಎಂಟು ಕಿ.ಮೀ. ಮ್ಯಾರಥಾನ್ ನಡೆಯಿತು. ಓಟದಲ್ಲಿ ಪಾಲ್ಗೊಂಡವರಿಗೆ ಪ್ರಮಾಣಪತ್ರ ವಿತರಿಸಲಾಯಿತು.</p>.<p>ರಾಜ್ಯಸಭೆಯ ಮಾಜಿ ಸದಸ್ಯ ಎಂ.ವಿ. ರಾಜೀವ್ ಗೌಡ, ಬೆಂಗಳೂರು ನಗರ ಕಾಂಗ್ರೆಸ್ ಅಧ್ಯಕ್ಷ ನಂದಕುಮಾರ್, ಮುಖಂಡರಾದ ಅಗರ ಪ್ರಕಾಶ್, ಚನ್ನಕೇಶವ, ವೀರಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>