‘ವಾಯುವಿಹಾರಕ್ಕೆ ಹೋಗುತ್ತಿದ್ದ ಹಾಗೂ ಮನೆ ಎದುರು ಓಡಾಡುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಆರೋಪಿಗಳು ಕೃತ್ಯ ಎಸಗುತ್ತಿದ್ದರು. ಮಾಗಡಿ ರಸ್ತೆ, ಬ್ಯಾಡರಹಳ್ಳಿ, ಚಂದ್ರಾ ಲೇಔಟ್, ವಿಜಯನಗರ, ಜ್ಞಾನಭಾರತಿ, ಕಾಟನ್ಪೇಟೆ, ರಾಮಮೂರ್ತಿನಗರ, ಯಲಹಂಕ, ಹೆಣ್ಣೂರು, ಸುಬ್ರಹ್ಮಣ್ಯನಗರ, ಬಾಣಸವಾಡಿ, ಕೊಡಿಗೇಹಳ್ಳಿ, ಬೆಳ್ಳಂದೂರು, ಬಾಗಲೂರು, ಬನಶಂಕರಿ, ವಿದ್ಯಾರಣ್ಯಪುರ, ಜಗಜೀವನರಾಮನಗರ ಠಾಣೆ ವ್ಯಾಪ್ತಿಯಲ್ಲಿ 27 ಮಹಿಳೆಯರ ಸರಗಳನ್ನು ಆರೋಪಿಗಳು ಕಳವುಮಾಡಿದ್ದರು. ಇವರ ವಿರುದ್ಧ ಧಾರವಾಡದ ವಿದ್ಯಾಗಿರಿ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿದ್ದವು’ ಎಂದೂ ತಿಳಿಸಿದರು.