ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನಾಭರಣ, ಬೈಕ್ ವಶ: ಆರೋಪಿ ಬಂಧನ

Last Updated 7 ಏಪ್ರಿಲ್ 2021, 23:14 IST
ಅಕ್ಷರ ಗಾತ್ರ

ಬೆಂಗಳೂರು: ಮನೆಗಳಿಗೆ ನುಗ್ಗಿ ಚಿನ್ನಾಭರಣ ಹಾಗೂ ನಗರದ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಆರೋಪಿಯನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ.

ರಾಜಾಜಿನಗರದ ಮಂಜುನಾಥ ನಗರದ ನಿವಾಸಿ ಪ್ರಶಾಂತ್ (21) ಬಂಧಿತ ಆರೋಪಿ.

ಕಳೆದ ಡಿಸೆಂಬರ್‌ನಲ್ಲಿಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಚಿನ್ನಾಭರಣ ಕಳ್ಳತನವಾಗಿತ್ತು. ಮನೆಯ ಮಾಲೀಕರು ಕೆಲಸಕ್ಕೆ ತೆರಳುವ ಆತುರದಲ್ಲಿ ಮನೆಗೆ ಬೀಗ ಹಾಕುವುದನ್ನು ಮರೆತಿದ್ದರು. ಮಧ್ಯಾಹ್ನ ವಾಪಸ್‌ ಬಂದಾಗ ಮನೆಯಲ್ಲಿದ್ದ 17 ಗ್ರಾಂ. ಚಿನ್ನಾಭರಣ ಹಾಗೂ ₹15 ಸಾವಿರ ನಗದು ಕಳವಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು.

ಆರೋಪಿಯನ್ನು ವಿಚಾರಣೆ ನಡೆಸಿದಾಗ, ಮಾಗಡಿ ರಸ್ತೆ, ಬ್ಯಾಡರಹಳ್ಳಿ, ಕೆ.ಪಿ.ಅಗ್ರಹಾರ ವ್ಯಾಪ್ತಿಗಳಲ್ಲಿ ಚಿನ್ನಾಭರಣ ಹಾಗೂ ಮಹಾಲಕ್ಷ್ಮೀ ಬಡಾವಣೆ, ಸುಬ್ರಹ್ಮಣ್ಯ ನಗರ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದಿರುವ ವಿಚಾರವನ್ನು ತಿಳಿಸಿದ್ದ.

‘ಆರೋಪಿಯಿಂದ ₹4.85 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಎರಡು ಬೈಕ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT