<p><strong>ಬೆಂಗಳೂರು:</strong> ವೃದ್ಧ ತಂದೆ-ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಶ್ರೀರಂಗಪಟ್ಟಣದ ಬಳಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಗನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಸಂತೋಷ್ ಬಂಧಿತ ಆರೋಪಿ. ತಂದೆ, ತಾಯಿಯನ್ನು ಕೊಲೆ ಮಾಡಿದ ಬಳಿಕ, ಅವರಿಗೆ ಪಿಂಡ ಬಿಟ್ಟು ತಲೆ ಬೋಳಿಸಿಕೊಂಡಿದ್ದ.ಕೆಲ ದಿನಗಳ ಬಳಿಕ ಶ್ರೀರಂಗಪಟ್ಟಣದಲ್ಲಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ.</p>.<p>ಆದರೆ, ಈ ವೇಳೆ ಆತನ ಎರಡು ಕಾಲು ಮುರಿದಿತ್, ಜೀವಕ್ಕೆ ಯಾವುದೇ ಅಪಾಯ ಉಂಟಾಗಿರಲಿಲ್ಲ. ಹೀಗಾಗಿ, ಆತನೇ ತನ್ನ ಸಂಬಂಧಿಕರಿಗೆ ಕರೆ ವಿಷಯ ತಿಳಿಸಿದ್ದ ಎನ್ನಲಾಗಿದೆ. ಅವರು ಪೊಲೀಸರಿಗೆ ವಿಷಯ ತಲುಪಿಸಿದ್ದಿ, ತಕ್ಷಣ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ.</p>.<p>ಕಾಮಾಕ್ಷಿಪಾಳ್ಯದ ರಂಗನಾಥಪುರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ತಂದೆ ನರಸಿಂಹ ರಾಜು (70) ಮತ್ತು ತಾಯಿ ಸರಸ್ವತಿ (64) ಅವರನ್ನು ಸಂತೋಷ್ ಬುಧವಾರ ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಸಂತೋಷ್ ನಾಪತ್ತೆಯಾಗಿದ್ದನು. ಈ ಹಿನ್ನೆಲೆಯಲ್ಲಿ ಪೊಲೀಸರು ಮಗನ ಮೇಲೆಯೇ ಸಂಶಯ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವೃದ್ಧ ತಂದೆ-ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಶ್ರೀರಂಗಪಟ್ಟಣದ ಬಳಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಗನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಸಂತೋಷ್ ಬಂಧಿತ ಆರೋಪಿ. ತಂದೆ, ತಾಯಿಯನ್ನು ಕೊಲೆ ಮಾಡಿದ ಬಳಿಕ, ಅವರಿಗೆ ಪಿಂಡ ಬಿಟ್ಟು ತಲೆ ಬೋಳಿಸಿಕೊಂಡಿದ್ದ.ಕೆಲ ದಿನಗಳ ಬಳಿಕ ಶ್ರೀರಂಗಪಟ್ಟಣದಲ್ಲಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ.</p>.<p>ಆದರೆ, ಈ ವೇಳೆ ಆತನ ಎರಡು ಕಾಲು ಮುರಿದಿತ್, ಜೀವಕ್ಕೆ ಯಾವುದೇ ಅಪಾಯ ಉಂಟಾಗಿರಲಿಲ್ಲ. ಹೀಗಾಗಿ, ಆತನೇ ತನ್ನ ಸಂಬಂಧಿಕರಿಗೆ ಕರೆ ವಿಷಯ ತಿಳಿಸಿದ್ದ ಎನ್ನಲಾಗಿದೆ. ಅವರು ಪೊಲೀಸರಿಗೆ ವಿಷಯ ತಲುಪಿಸಿದ್ದಿ, ತಕ್ಷಣ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ.</p>.<p>ಕಾಮಾಕ್ಷಿಪಾಳ್ಯದ ರಂಗನಾಥಪುರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ತಂದೆ ನರಸಿಂಹ ರಾಜು (70) ಮತ್ತು ತಾಯಿ ಸರಸ್ವತಿ (64) ಅವರನ್ನು ಸಂತೋಷ್ ಬುಧವಾರ ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಸಂತೋಷ್ ನಾಪತ್ತೆಯಾಗಿದ್ದನು. ಈ ಹಿನ್ನೆಲೆಯಲ್ಲಿ ಪೊಲೀಸರು ಮಗನ ಮೇಲೆಯೇ ಸಂಶಯ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>