ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃದ್ಧ ದಂಪತಿ ಕೊಲೆ: ಮಗನೇ ಹಂತಕ!

Last Updated 11 ಜೂನ್ 2020, 10:59 IST
ಅಕ್ಷರ ಗಾತ್ರ

ಬೆಂಗಳೂರು: ವೃದ್ಧ ತಂದೆ-ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಶ್ರೀರಂಗಪಟ್ಟಣದ ಬಳಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಸಂತೋಷ್ ಬಂಧಿತ ಆರೋಪಿ. ತಂದೆ, ತಾಯಿಯನ್ನು ಕೊಲೆ ಮಾಡಿದ ಬಳಿಕ, ಅವರಿಗೆ ಪಿಂಡ ಬಿಟ್ಟು ತಲೆ ಬೋಳಿಸಿಕೊಂಡಿದ್ದ.ಕೆಲ ದಿನಗಳ ಬಳಿಕ ಶ್ರೀರಂಗಪಟ್ಟಣದಲ್ಲಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ.

ಆದರೆ, ಈ ವೇಳೆ ಆತನ ಎರಡು ಕಾಲು ಮುರಿದಿತ್, ಜೀವಕ್ಕೆ ಯಾವುದೇ ಅಪಾಯ ಉಂಟಾಗಿರಲಿಲ್ಲ. ಹೀಗಾಗಿ, ಆತನೇ ತನ್ನ ಸಂಬಂಧಿಕರಿಗೆ ಕರೆ ವಿಷಯ ತಿಳಿಸಿದ್ದ ಎನ್ನಲಾಗಿದೆ. ಅವರು ಪೊಲೀಸರಿಗೆ ವಿಷಯ ತಲುಪಿಸಿದ್ದಿ, ತಕ್ಷಣ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಕಾಮಾಕ್ಷಿಪಾಳ್ಯದ ರಂಗನಾಥಪುರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ತಂದೆ ನರಸಿಂಹ ರಾಜು (70) ಮತ್ತು ತಾಯಿ ಸರಸ್ವತಿ (64) ಅವರನ್ನು ಸಂತೋಷ್‌ ಬುಧವಾರ ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಸಂತೋಷ್ ನಾಪತ್ತೆಯಾಗಿದ್ದನು. ಈ ಹಿನ್ನೆಲೆಯಲ್ಲಿ ಪೊಲೀಸರು ಮಗನ ಮೇಲೆಯೇ ಸಂಶಯ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT