‘ಜ.16ರಂದು ಬೆಳಿಗ್ಗೆ 10.30ರ ಸುಮಾರಿಗೆ ಪತ್ನಿ ಶಿಲ್ಪಾ ಜೊತೆ ಗೋಪಿಕೃಷ್ಣ, ಸಹೋದರ ಸೋಮೇಶ್ ಮನೆಗೆ ಹೋಗಿದ್ದ. ಸೋಮೇಶ್ ಮನೆಯಲ್ಲಿ ಇರಲಿಲ್ಲ. ಮನೆಯಲ್ಲಿದ್ದ ತಾಯಿ ಗುಣಮ್ಮ ಅವರ ಕತ್ತಿಗೆ ಮೂರ್ನಾಲ್ಕು ಬಾರಿ ಚಾಕುವಿನಿಂದ ಇರಿದಿದ್ದ. ರಕ್ಷಣೆಗೆ ಬಂದ ನಾದಿನಿ ಗಿರಿಜಾ ಹಾಗೂ ಮನೆಯಲ್ಲಿ ಆಟವಾಡುತ್ತಿದ್ದ ಅಕ್ಷತಾಳಿಗೂ ಚಾಕುವಿನಿಂದ ಇರಿದಿದ್ದ. ಗಾಯಾಳುಗಳ ಚೀರಾಟ ಕೇಳಿ ಸಹಾಯಕ್ಕೆ ಬಂದಿದ್ದ ಸ್ಥಳೀಯರು, ಮೂವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ಸೋಮೇಶ್ ಅವರು ದೂರು ನೀಡಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.